Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:28 - ಪರಿಶುದ್ದ ಬೈಬಲ್‌

28 ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:28
25 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ.


ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.


ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.


ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು.


ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು.


ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು.


ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.


ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.


ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ಆಗ ಸೊಲೊಮೋನನು, “ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು.


ರಾಜನಾದ ಸೊಲೊಮೋನನು ಇಸ್ರೇಲಿನ ಜನತೆಯನ್ನೆಲ್ಲ ಆಳಿದನು.


ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು.


ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.


ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.


ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.


ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು.


ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು