Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:31 - ಪರಿಶುದ್ದ ಬೈಬಲ್‌

31 ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಮುತ್ತಲಿನ ಜನಾಂಗಗಳಲ್ಲೆಲ್ಲಾ ಅವನ ಹೆಸರು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜೇರಹನ ಮಗನಾದ ಏತಾನನು, ಮಹೋಲನ ಮಕ್ಕಳಾದ ಹೇಮಾನನು, ಕಲ್ಕೋಲನು, ದರ್ದನು ಮೊದಲಾದ ಸಮಸ್ತ ಮನುಷ್ಯರಿಗಿಂತಲೂ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ದೇಶಗಳಲ್ಲಿ ಅವನ ಕೀರ್ತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:31
16 ತಿಳಿವುಗಳ ಹೋಲಿಕೆ  

ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನ್ ಕಂಚಿನ ತಾಳವನ್ನು ಬಾರಿಸಿದರು.


ಜೆರಹನಿಗೆ ಐದು ಗಂಡುಮಕ್ಕಳು. ಅವರು ಯಾರೆಂದರೆ: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರ.


ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.


“ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!


“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.


ಗಾಯನದ ಮೂಲಕ ಸೇವೆಮಾಡಿದ ತಂದೆಗಳ ಮತ್ತು ಅವರ ಗಂಡುಮಕ್ಕಳ ಪಟ್ಟಿ: ಕೆಹಾತ್ಯನ ಸಂತತಿಯವರಿಂದ ಗಾಯಕನಾದ ಹೇಮಾನ. ಇವನು ಯೋವೇಲನ ಮಗ. ಯೋವೇಲನು ಸಮುವೇಲನ ಮಗ.


ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ಯೆಹೋವ ದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.


ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.


ಲೇವಿಯರು ಹೋಗಿ ಹೇಮಾನನನ್ನೂ ಅವನ ಸಹೋದರರನ್ನೂ ಆಸಾಫನನ್ನೂ ಏತಾನನನ್ನೂ ಕರೆತಂದರು. ಹೇಮಾನನು ಯೋವೇಲನ ಮಗ. ಆಸಾಫನು ಬೆರೆಕ್ಯನ ಮಗ. ಏತಾನನು ಕೂಷಾಯನ ಮಗ. ಇವರೆಲ್ಲಾ ಮೆರಾರೀಯ ಸಂತತಿಯವರು.


ಆದ್ದರಿಂದ ರಾಣಿಯು ರಾಜನಿಗೆ, “ನಿನ್ನ ಜ್ಞಾನದ ಬಗ್ಗೆ ಮತ್ತು ನೀನು ಮಾಡುವ ಕಾರ್ಯಗಳ ಬಗ್ಗೆ ಅನೇಕ ಸಂಗತಿಗಳನ್ನು ನಾನು ನನ್ನ ದೇಶದಲ್ಲಿ ಕೇಳಿದ್ದೇನೆ. ಆ ಸಂಗತಿಗಳೆಲ್ಲ ನಿಜ!


ಶೆಬದ ರಾಣಿ ಸೊಲೊಮೋನನ ಬಗ್ಗೆ ಕೇಳಿದಳು. ಅವಳು ಒಗಟುಗಳಿಂದ ಅವನನ್ನು ಪರೀಕ್ಷಿಸಲು


ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು.


ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು