Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:5 - ಪರಿಶುದ್ದ ಬೈಬಲ್‌

5 ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾತಾನನ ಮಗನಾದ ಅಜರ್ಯನು ಪ್ರದೇಶಾಧಿಪತಿಗಳ ಮುಖ್ಯಸ್ಥನು; ನಾತಾನನ ಮಗನಾದ ಜಾಬೂದನು ಯಾಜಕನೂ ಅರಸನ ವಿುತ್ರನೂ ಆಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:5
17 ತಿಳಿವುಗಳ ಹೋಲಿಕೆ  

ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು.


ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು.


ದಾವೀದನ ಗೆಳೆಯನಾದ ಹೂಷೈ ನಗರಕ್ಕೆ ಹೋದನು. ಅಬ್ಷಾಲೋಮನು ಜೆರುಸಲೇಮಿಗೆ ಬಂದನು.


ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.


ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು.


ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು.


ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.


ಯಾಯೀರಿನವನಾದ ಈರನು ದಾವೀದನ ಮುಖ್ಯ ಸೇವಕನಾಗಿದ್ದನು.


ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದಿಂದ ನಿರ್ಮಿಸಿದ ವೈಭವದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು.


ಅಹೀಷಾರ್; ಅಹೀಷಾರನು ರಾಜನ ಅರಮನೆಯ ಪ್ರತಿಯೊಂದರಲ್ಲೂ ಜವಾಬ್ದಾರನಾಗಿದ್ದನು. ಅಬ್ದನ ಮಗನಾದ ಅದೋನೀರಾಮ; ಅದೋನೀರಾಮನು ಗುಲಾಮರ ಮೇಲ್ವಿಚಾರಕನಾಗಿದ್ದನು.


ಜೆರುಸಲೇಮಿನಲ್ಲಿ ದಾವೀದನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು