Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:7 - ಪರಿಶುದ್ದ ಬೈಬಲ್‌

7 ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವ ಇಸ್ರಯೇಲರ ಮೇಲೆ ಸೊಲೊಮೋನನು ಹನ್ನೆರಡು ಜನ ಜಿಲ್ಲಾಧಿಕಾರಿಗಳನ್ನು ನೇಮಿಸಿದ್ದನು. ಅವರು ತಮ್ಮ ಜಿಲ್ಲೆಗಳಿಂದ ಅರಸನಿಗೂ ಅರಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದರು. ಪ್ರತಿಯೊಬ್ಬನೂ ವರ್ಷದಲ್ಲಿ ಒಂದೊಂದು ತಿಂಗಳು ಪೂರೈಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಮೇಲೆ ಹನ್ನೆರಡು ಮಂದಿ ಪ್ರದೇಶಾಧಿಪತಿಗಳನ್ನು ನೇವಿುಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಅವನ ಮನೆಯವರಿಗೂ ಬೇಕಾದ ಆಹಾರಪದಾರ್ಥಗಳನ್ನು ಪ್ರತಿವರುಷವೂ ಒದಗಿಸಿ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:7
6 ತಿಳಿವುಗಳ ಹೋಲಿಕೆ  

ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.


ಅಹೀಷಾರ್; ಅಹೀಷಾರನು ರಾಜನ ಅರಮನೆಯ ಪ್ರತಿಯೊಂದರಲ್ಲೂ ಜವಾಬ್ದಾರನಾಗಿದ್ದನು. ಅಬ್ದನ ಮಗನಾದ ಅದೋನೀರಾಮ; ಅದೋನೀರಾಮನು ಗುಲಾಮರ ಮೇಲ್ವಿಚಾರಕನಾಗಿದ್ದನು.


ಹನ್ನೆರಡು ರಾಜ್ಯಪಾಲರುಗಳ ಹೆಸರುಗಳು ಹೀಗಿವೆ: ಎಫ್ರಾಯೀಮ್ ಬೆಟ್ಟಪ್ರದೇಶಕ್ಕೆ ಬೆನ್-ಹೂರನು ರಾಜ್ಯಪಾಲನಾಗಿದ್ದನು.


“ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.


ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು