Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:4 - ಪರಿಶುದ್ದ ಬೈಬಲ್‌

4 ಆದರೆ ಈಗ ನನ್ನ ದೇವರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:4
11 ತಿಳಿವುಗಳ ಹೋಲಿಕೆ  

ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.


ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.


“ನೀನು ನನ್ನ ಸೇವಕನಾದ ದಾವೀದನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸು: ‘ನನ್ನ ವಾಸಕ್ಕಾಗಿ ಆಲಯವನ್ನು ಕಟ್ಟುವ ವ್ಯಕ್ತಿಯು ನೀನಲ್ಲ.


ಅಷ್ಡೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೆನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು.


ನಂತರ ಸೊಲೊಮೋನನ ಮತ್ತು ಹೀರಾಮನ ಕಟ್ಟಡ ಕಟ್ಟುವವರು ಮತ್ತು ಗೆಬಾಲ್ಯ ಜನರು ಈ ಕಲ್ಲುಗಳನ್ನು ಕೆತ್ತಿದರು. ಅವರು ಕಲ್ಲುಗಳನ್ನು ಮತ್ತು ತೊಲೆಗಳನ್ನು ದೇವಾಲಯದ ನಿರ್ಮಾಣಕ್ಕಾಗಿ ಸಿದ್ಧಗೊಳಿಸಿದರು.


ರೆಜೋನನು ಅರಾಮನ್ನು ಆಳಿದನು. ರೆಜೋನನು ಇಸ್ರೇಲಿನ ದ್ವೇಷಿಯಾದ್ದರಿಂದ, ಸೊಲೊಮೋನನ ಜೀವಮಾನದಲ್ಲೆಲ್ಲಾ ಅವನು ಇಸ್ರೇಲಿನ ಶತ್ರುವಾಗಿಯೇ ಮುಂದುವರಿದನು. ರೆಜೋನ್ ಮತ್ತು ಹದದನು ಇಸ್ರೇಲಿಗೆ ಹೆಚ್ಚು ತೊಂದರೆಯನ್ನು ಉಂಟುಮಾಡಿದರು.


ಹಿಜ್ಕೀಯನು ಗಾಜಾ ಪ್ರಾಂತ್ಯದವರೆಗಿದ್ದ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿದ್ದ ಫಿಲಿಷ್ಟಿಯರನ್ನು ಸೋಲಿಸಿದನು. ಅವನು ಫಿಲಿಷ್ಟಿಯರ ಚಿಕ್ಕ ಊರಿನಿಂದಿಡಿದು ದೊಡ್ಡ ನಗರಗಳನ್ನೆಲ್ಲಾ ಸೋಲಿಸಿದನು.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು