1 ಅರಸುಗಳು 5:9 - ಪರಿಶುದ್ದ ಬೈಬಲ್9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು. ಅಧ್ಯಾಯವನ್ನು ನೋಡಿ |
ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.
ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.