23 ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಆಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ಹದಿನೈದು ಅಡಿ ಎತ್ತರವಾಗಿತ್ತು.
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.
ಈ ಎರಡು ಕೆರೂಬಿಗಳು ಅಳತೆಯಲ್ಲಿಯೂ ಆಕಾರದಲ್ಲಿಯೂ ಒಂದೇ ರೀತಿಯಾಗಿದ್ದವು. ಪ್ರತಿಯೊಂದು ಕೆರೂಬಿಗಳಿಗೆ ಎರಡು ರೆಕ್ಕೆಗಳಿದ್ದವು. ಪ್ರತಿಯೊಂದು ರೆಕ್ಕೆಯ ಉದ್ದ ಏಳುವರೆ ಅಡಿಗಳು. ಒಂದು ರೆಕ್ಕೆಯಿಂದ ಮತ್ತೊಂದು ರೆಕ್ಕೆಯ ಕೊನೆಗಿರುವ ಅಂತರ ಹದಿನೈದು ಅಡಿಗಳು. ಪ್ರತಿಯೊಂದು ಕೆರೂಬಿಯ ಎತ್ತರ ಹದಿನೈದು ಅಡಿಗಳು.
ಕೆಲಸಗಾರರು ಆಲೀವ್ ಮರದ ಎರಡು ಬಾಗಿಲುಗಳನ್ನು ಮಾಡಿದರು. ಅವರು ಮಹಾಪವಿತ್ರ ಸ್ಥಳದ ಪ್ರವೇಶದ್ವಾರದಲ್ಲಿ ಈ ಎರಡು ಬಾಗಿಲುಗಳನ್ನು ಇಟ್ಟರು. ಬಾಗಿಲಿನ ಚೌಕಟ್ಟನ್ನು ಪಂಚಕೋಣಾಕೃತಿಯಲ್ಲಿ ಮಾಡಿದ್ದರು.
ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.