Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:36 - ಪರಿಶುದ್ದ ಬೈಬಲ್‌

36 ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:36
10 ತಿಳಿವುಗಳ ಹೋಲಿಕೆ  

ಅರಮನೆಯ ಅಂಗಳದ, ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಈ ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು.


ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ಆಲಯದ ಮುಂದೆ ಇದ್ದ ಅಂಗಳವನ್ನು ಸೊಲೊಮೋನನು ಶುದ್ಧೀಕರಿಸಿದನು. ಆ ಸ್ಥಳದಲ್ಲಿ ಸೊಲೊಮೋನನು ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಿದ್ದನು. ಯಾಕೆಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಕೆಯ ಮೇಲೆ ಇಷ್ಟೆಲ್ಲಾ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಲು ಆಗದೆಹೋಯಿತು.


ಇದಲ್ಲದೆ ಸೊಲೊಮೋನನು ಯಾಜಕರ ಅಂಗಳವನ್ನೂ ಮಹಾಅಂಗಳವನ್ನೂ ಮಹಾಅಂಗಳಕ್ಕೆ ಬಾಗಿಲುಗಳನ್ನೂ ಸಿದ್ಧಪಡಿಸಿದನು. ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಲಾಗಿದ್ದವು.


ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು.


ಅದರ ಗೋಡೆಯಲ್ಲಿ ಮೂರುಸಾಲು ದೊಡ್ಡ ಗಾತ್ರದ ಕಲ್ಲುಗಳಿರಬೇಕು; ಒಂದು ಸಾಲಿನಲ್ಲಿ ಮರದ ತೊಲೆಗಳಿರಬೇಕು. ದೇವಾಲಯ ಕಟ್ಟಲು ತಗಲುವ ಖರ್ಚುವೆಚ್ಚವೆಲ್ಲವನ್ನು ರಾಜನ ಖಜಾನೆಯಿಂದ ಕೊಡಬೇಕು.


ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.


ಆಮೇಲೆ ಅವನು ದಕ್ಷಿಣದ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಈ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಬೇರೆ ದ್ವಾರಗಳಂತೆಯೇ ಉದ್ದಗಲವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು