Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:15 - ಪರಿಶುದ್ದ ಬೈಬಲ್‌

15 ಹೀರಾಮನು ಎರಡು ಹಿತ್ತಾಳೆಯ ಕಂಬಗಳನ್ನು ನಿರ್ಮಿಸಿದನು, ಪ್ರತಿಯೊಂದು ಕಂಬದ ಎತ್ತರ ಇಪ್ಪತ್ತೇಳು ಅಡಿ; ಸುತ್ತಳತೆ ಹದಿನೆಂಟು ಅಡಿ. ಈ ಕಂಬಗಳು ಟೊಳ್ಳಾಗಿದ್ದವು; ಲೋಹವು ಮೂರು ಇಂಚು ದಪ್ಪವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಎರಡು ಕಂಚಿನ ಕಂಬಗಳನ್ನು ಮಾಡಿದನು. ಅವು 8 ಮೀಟರ್ ಎತ್ತರವಿದ್ದವು. ಅವುಗಳ ಸುತ್ತಳತೆಯು 5:3 ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಎರಡು ಕಂಚಿನ ಸ್ತಂಭಗಳನ್ನು ಮಾಡಿದನು. ಒಂದೊಂದು ಸ್ತಂಭ 8 ಮೀಟರ್ ಉದ್ದ. ಒಂದೊಂದು ಸ್ತಂಭದ ಸುತ್ತಳತೆ 5.3 ಮೀಟರ್ ನೂಲಳತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:15
13 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕಂಚಿನ ಕಂಬ ಇಪ್ಪತ್ತೇಳು ಅಡಿ ಎತ್ತರವಾಗಿದ್ದು ಅದರ ಸುತ್ತಳತೆ ಹದಿನೆಂಟು ಅಡಿ ಇತ್ತು. ಪ್ರತಿಯೊಂದು ಕಂಬ ಟೊಳ್ಳಾಗಿದ್ದು ಅದರ ತಗಡು ನಾಲ್ಕು ಅಂಗುಲ ದಪ್ಪವಾಗಿತ್ತು.


ಹೀರಾಮನು ಈ ಹಿತ್ತಾಳೆಯ ಕಂಬಗಳನ್ನು ದೇವಾಲಯದ ಮಂಟಪದಲ್ಲಿ ಇಟ್ಟನು. ಒಂದು ಸ್ತಂಭವನ್ನು ಪ್ರವೇಶದ್ವಾರದ ದಕ್ಷಿಣದಿಕ್ಕಿನ ಕಡೆಯಲ್ಲೂ ಮತ್ತೊಂದನ್ನು ಉತ್ತರದಿಕ್ಕಿನ ಕಡೆಯಲ್ಲೂ ಇಟ್ಟನು. ದಕ್ಷಿಣದ ಸ್ತಂಭಕ್ಕೆ ಯಾಕೀನ್ ಎಂದು ಹೆಸರಿಟ್ಟನು. ಉತ್ತರದ ಸ್ತಂಭಕ್ಕೆ ಬೋವಜ್ ಎಂದು ಹೆಸರಿಟ್ಟನು.


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ಎರಡು ಸ್ತಂಭಗಳು; ಈ ಸ್ತಂಭಗಳ ಮೇಲೆ ಮಡಕೆಯ ಆಕಾರದ ಎರಡು ಬೋದಿಗೆಗಳು; ಬೋದಿಗೆಯ ಸುತ್ತಲೂ ಹಬ್ಬಿದಂತಿರುವ ಎರಡು ಜಾಲರಿಗಳು;


ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಈ ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು.


ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರುಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


“ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.


ಬಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಬಗಳನ್ನು ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನ್ನು ಮತ್ತು ಕಂಚಿನ ಸರೋವರಗಳನ್ನು ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನ್ನೆರಡು ಮೊಳ ಉದ್ದವಾಗಿತ್ತು. ಆ ಕೈಸಾಲೆಯನ್ನು ಹತ್ತಲು ಹತ್ತು ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ ಗೋಡೆಗಳಿಗೆ ಸ್ತಂಭಗಳಿದ್ದವು.


ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು