Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:23 - ಪರಿಶುದ್ದ ಬೈಬಲ್‌

23 ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:23
13 ತಿಳಿವುಗಳ ಹೋಲಿಕೆ  

ಅವನು ಎರಕಹೊಯ್ದ ದೊಡ್ಡ ಗಾತ್ರದ ನೀರಿನ ಪಾತ್ರೆಯನ್ನು ಮಾಡಿಸಿದನು. ಇದು ದುಂಡಾಕಾರವಾಗಿದ್ದು ಅದರ ಬಾಯಿಯ ಅಂಚಿನಿಂದ ಅಂಚಿಗೆ ಹತ್ತು ಮೊಳ ಅಗಲವಿತ್ತು; ಅದರ ಸುತ್ತಳತೆ ಮೂವತ್ತು ಮೊಳ; ಎತ್ತರ ಐದು ಮೊಳ.


ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರುಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಬಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಬಗಳನ್ನು ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನ್ನು ಮತ್ತು ಕಂಚಿನ ಸರೋವರಗಳನ್ನು ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಅದನ್ನು ಹೊತ್ತುಕೊಂಡಿರುವ ಹನ್ನೆರಡು ಕಂಚಿನ ಹೋರಿಗಳು ಮತ್ತು ಚಲಿಸಬಲ್ಲ ಅಡ್ಡಣಿಗಳು ಬಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಆ ವಸ್ತುಗಳನ್ನು ಮಾಡಿಸಿದ್ದನು. ಆ ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು.


ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು.


ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು.


ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು.


ಅವರು ಹೂ ಆಕಾರದ ಬೋದಿಗೆಗಳನ್ನು ಸ್ತಂಭಗಳ ಮೇಲಿನ ತುದಿಯಲ್ಲಿಟ್ಟರು. ಆ ಎರಡು ಸ್ತಂಭಗಳ ಕೆಲಸವು ಮುಗಿಯಿತು.


ಹನ್ನೆರಡು ಹೋರಿಗಳು ಹೊತ್ತುಕೊಂಡಿರುವ ಒಂದು ಜಲಾಶಯ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.


“ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು