Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:12 - ಪರಿಶುದ್ದ ಬೈಬಲ್‌

12 ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೋ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು : “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತರುವಾಯ ಸೊಲೊಮೋನನು - ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:12
12 ತಿಳಿವುಗಳ ಹೋಲಿಕೆ  

ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!


ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ ಇಸ್ರೇಲರ ವಿಮೋಚಕನು.


ನೀವು ಒಂದು ಹೊಸ ಸ್ಥಳಕ್ಕೆ ಬಂದಿರುವಿರಿ. ಅದು ಇಸ್ರೇಲಿನ ಜನರು ಬಂದ ಬೆಟ್ಟದ ಸ್ಥಳವಲ್ಲ. ಮುಟ್ಟುವುದಕ್ಕೆ ಸಾಧ್ಯವಾಗುವಂತಹ ಮತ್ತು ಬೆಂಕಿ ಹತ್ತಿಕೊಂಡಿರುವಂತಹ ಬೆಟ್ಟದ ಬಳಿಗೆ ನೀವು ಬಂದಿಲ್ಲ. ನೀವು ಕಗ್ಗತ್ತಲೆ, ದುಃಖ ಮತ್ತು ಬಿರಗಾಳಿಯ ಬಳಿಗೆ ಬಂದಿಲ್ಲ.


ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.


ಆಗ ನೀವು ಬೆಟ್ಟದ ಸಮೀಪಕ್ಕೆ ಬಂದು ನಿಂತುಕೊಂಡಿರಿ. ಆ ಪರ್ವತವು ಬೆಂಕಿಯಿಂದ ಪ್ರಜ್ವಲಿಸಿ ಆಕಾಶದ ತನಕ ಮುಟ್ಟಿತ್ತು. ಆಗ ಕಾರ್ಮೋಡವೂ ಕತ್ತಲೆಯೂ ಆವರಿಸಿತು.


ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು.


ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು.


ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ತಮ್ಮ ಕಾರ್ಯವನ್ನು ಮುಂದುವರಿಸಲಾಗಲಿಲ್ಲ.


ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು. ಎಜ್ರನು ಧರ್ಮಶಾಸ್ತ್ರವನ್ನು ತೆರೆಯುವಾಗ ಎಲ್ಲಾ ಜನರು ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು