Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:14 - ಪರಿಶುದ್ದ ಬೈಬಲ್‌

14 ಇಸ್ರೇಲಿನ ಜನರೆಲ್ಲರೂ ಅಲ್ಲಿ ನಿಂತಿದ್ದರು. ರಾಜನಾದ ಸೊಲೊಮೋನನು ಅವರ ಕಡೆಗೆ ತಿರುಗಿ, ಅವರನ್ನು ಆಶೀರ್ವದಿಸಲು ದೇವರನ್ನು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಾದ ಮೇಲೆ ಅರಸನು ಎದ್ದುನಿಂತಿದ್ದ ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:14
14 ತಿಳಿವುಗಳ ಹೋಲಿಕೆ  

ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು.


ಅನೇಕ ಜನರು ಯೇಸುವಿನ ಸುತ್ತಲೂ ನೆರೆದರು. ಆಗ ಯೇಸು ದೋಣಿಯೊಳಕ್ಕೆ ಹೋಗಿ ಕುಳಿತುಕೊಂಡನು. ಜನರೆಲ್ಲರೂ ದಡದಲ್ಲಿ ನಿಂತಿದ್ದರು.


ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಸುಸ್ವಾಗತ!” “ಯೆಹೋವನ ಆಲಯದಿಂದ ನಾವು ನಿನ್ನನ್ನು ಆಶೀರ್ವದಿಸುತ್ತೇವೆ!


ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.


ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.


ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.


ಸೊಲೊಮೋನನು ತನ್ನ ಮುಂದೆ ನೆರೆದಿದ್ದ ಎಲ್ಲಾ ಇಸ್ರೇಲ್ ಸಮೂಹದವರ ಕಡೆಗೆ ತಿರುಗಿ ಅವರನ್ನು ಆಶೀರ್ವದಿಸಿ,


ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು.


ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು.


ಗುಡಾರದ ದ್ವಾರದಲ್ಲಿ ಮೇಘಸ್ತಂಭವಿರುವುದನ್ನು ಜನರು ನೋಡಿದಾಗ, ಅವರು ತಮ್ಮ ಸ್ವಂತ ಡೇರೆಗಳ ದ್ವಾರದಲ್ಲಿ ತಲೆಬಾಗಿ ಯೆಹೋವನನ್ನು ಆರಾಧಿಸುತ್ತಿದ್ದರು.


ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು