Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:15 - ಪರಿಶುದ್ದ ಬೈಬಲ್‌

15 ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದದ್ದನ್ನು ಆತನ ಹಸ್ತವು ಈಗ ನೆರವೇರಿಸಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಂತರ ರಾಜನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:15
29 ತಿಳಿವುಗಳ ಹೋಲಿಕೆ  

“ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.


ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.


ಇದನ್ನು ಆತನು ಪೂರ್ವಕಾಲದ ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.


ನಾವಾದರೋ ಯೆಹೋವನನ್ನು ಈಗಲೂ ಯಾವಾಗಲೂ ಸ್ತುತಿಸುವೆವು! ಯೆಹೋವನಿಗೆ ಸ್ತೋತ್ರ!


“ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಿದ್ದಾನೆ. ಆತನು ದಾವೀದನಿಗೆ,


ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.


ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ.


ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್!


ನಾಲ್ಕನೆಯ ದಿವಸದಲ್ಲಿ ಯೆಹೋಷಾಫಾಟನೂ ಅವನ ಸೈನ್ಯವೂ ಬೆರಾಕ ತಗ್ಗಿನಲ್ಲಿ ಬಂದು ಸೇರಿದರು. ಅಲ್ಲಿ ಯೆಹೋವನಿಗೆ ಸ್ತೋತ್ರ ಮಾಡಿದರು. ಆದ್ದರಿಂದ ಈ ದಿನದವರೆಗೂ ಅದಕ್ಕೆ ಬೆರಾಕ ತಗ್ಗು ಎಂಬ ಹೆಸರಿದೆ.


ನಿನ್ನ ಮಗನು ನನಗೆ ಆಲಯವನ್ನು ಕಟ್ಟುವನು. ನಿನ್ನ ಮಗನ ವಂಶವು ಸದಾಕಾಲಕ್ಕೂ ಇಸ್ರೇಲ್ ಜನಾಂಗವನ್ನು ಆಳುವದು.


“ದೇವರಾದ ಯೆಹೋವನೇ, ಈಗ ನೀನು ನನ್ನ ಬಗ್ಗೆ ಮಾತನಾಡಿರುವೆ. ನಾನು ನಿನ್ನ ಸೇವಕ. ನೀನು ನನ್ನ ಕುಲದ ಬಗ್ಗೆಯೂ ವಾಗ್ದಾನ ಮಾಡಿರುವೆ. ನಿನ್ನ ವಾಗ್ದಾನಗಳನ್ನು ನೆರವೇರಿಸು. ನೀನು ವಾಗ್ದಾನ ಮಾಡಿದ ಕಾರ್ಯಗಳನ್ನು ಮಾಡು.


“ನೀನು ನನ್ನ ಸೇವಕನಾದ ದಾವೀದನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸು: ‘ನನ್ನ ವಾಸಕ್ಕಾಗಿ ಆಲಯವನ್ನು ಕಟ್ಟುವ ವ್ಯಕ್ತಿಯು ನೀನಲ್ಲ.


ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು.


ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.


ಅವನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು. ಅವನು ನನ್ನ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ನಾನು ಅವನ ರಾಜ್ಯವನ್ನು ಬಲಗೊಳಿಸುವೆನು; ಅವನ ಸಂತಾನದವರು ಇಸ್ರೇಲ್ ರಾಜ್ಯವನ್ನು ನಿರಂತರಕ್ಕೂ ಆಳುವರು’” ಎಂದು ಹೇಳಿದನು.


ಆಗ ದಾವೀದನು ಅಬೀಗೈಲಳಿಗೆ, “ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ದೇವರೇ ನಿನ್ನನ್ನು ನನ್ನ ಬಳಿಗೆ ಕಳುಹಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು