Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:20 - ಪರಿಶುದ್ದ ಬೈಬಲ್‌

20 “ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್‍ಸಿಂಹಾಸನದ ಮೇಲೆ ಅರಸನಾಗಿ ಕೂತುಕೊಂಡು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಯೆಹೋವ ದೇವರು ಮಾತುಕೊಟ್ಟ ಪ್ರಕಾರ, ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:20
15 ತಿಳಿವುಗಳ ಹೋಲಿಕೆ  

ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.


ದೇವರು ತಾನು ಮಾಡಿದ ವಾಗ್ದಾನವನ್ನು ಖಂಡಿತವಾಗಿ ನೆರವೇರಿಸಬಲ್ಲನೆಂದು ಅಬ್ರಹಾಮನು ದೃಢವಾಗಿ ನಂಬಿದನು.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ.


ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕೆಂದರೆ ನೀನು ಒಳ್ಳೆಯವನಾಗಿರುವೆ.


ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,


ಆದರೆ ದೇವಾಲಯವನ್ನು ಕಟ್ಟಿದ್ದು (ದಾವೀದನ ಮಗನಾದ) ಸೊಲೊಮೋನನೇ.


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.


‘ನಾನು ಕಣ್ಣಾರೆ ಕಾಣುವಂತೆ ನನ್ನ ಮಕ್ಕಳಲ್ಲಿ ಒಬ್ಬನನ್ನು ಇಂದು ಸಿಂಹಾಸನದ ಮೇಲೆ ಕುಳ್ಳಿರಿಸಿದ ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಎಂದನು.


ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು