Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:21 - ಪರಿಶುದ್ದ ಬೈಬಲ್‌

21 ಯೆಹೋವನ ಪೆಟ್ಟಿಗೆಗಾಗಿ ಆಲಯದಲ್ಲಿ ನಾನೊಂದು ಸ್ಥಳವನ್ನು ಮಾಡಿದ್ದೇನೆ. ಯೆಹೋವನು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಈ ಪವಿತ್ರಪೆಟ್ಟಿಗೆಯಲ್ಲಿದೆ. ಯೆಹೋವನು ನಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಈ ಒಡಂಬಡಿಕೆಯನ್ನು ಮಾಡಿಕೊಂಡನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದಲ್ಲದೆ, ಈಜಿಪ್ಟಿನಿಂದ ಬಿಡುಗಡೆಹೊಂದಿದ ನಮ್ಮ ಪಿತೃಗಳಿಗೆ ಸರ್ವೆಶ್ವರನಿಂದ ದೊರೆತ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಲ್ಲಿ ಅದನ್ನು ಇಟ್ಟಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಐಗುಪ್ತದಿಂದ ಬಿಡುಗಡೆ ಹೊಂದಿದ ನಮ್ಮ ಪಿತೃಗಳಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:21
8 ತಿಳಿವುಗಳ ಹೋಲಿಕೆ  

ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.


ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.


“ಹಾಗೆ ನಲವತ್ತು ದಿನಗಳ ಅಂತ್ಯದಲ್ಲಿ ಯೆಹೋವನು ಒಡಂಬಡಿಕೆಯನ್ನು ಬರೆದಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟನು.


ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ.


ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.


ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು