Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:30 - ಪರಿಶುದ್ದ ಬೈಬಲ್‌

30 ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:30
26 ತಿಳಿವುಗಳ ಹೋಲಿಕೆ  

ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.


ಆಗ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ಆಲಿಸು; ಅವರ ಪಾಪಗಳನ್ನು ಕ್ಷಮಿಸು; ನೀತಿಮಾರ್ಗವನ್ನು ಅವರಿಗೆ ಕಲಿಸು. ಬಳಿಕ ನೀನು ಅವರಿಗೆ ದಯಪಾಲಿಸಿದ ಭೂಮಿಯ ಮೇಲೆ ಮಳೆಯನ್ನು ಸುರಿಸು.


ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ.


ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು. ತಡಮಾಡಬೇಡ. ಈಗಲೇ ಸಹಾಯಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ನನ್ನ ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯಮಾಡು” ಎಂದು ಪ್ರಾರ್ಥಿಸಿದೆನು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸು.


ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.


ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.


ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!


ನಿನ್ನ ಜನರಾದ ಇಸ್ರೇಲರು ಮತ್ತು ನಾನು ಮಾಡುವ ಪ್ರಾರ್ಥನೆಯನ್ನು ಆಲೈಸು. ನಾವು ಈ ದೇವಾಲಯದ ಕಡೆಗೆ ತಿರುಗಿಕೊಂಡು ನಿನಗೆ ಪ್ರಾರ್ಥಿಸುವಾಗ ನಿನ್ನ ನಿವಾಸವಾದ ಪರಲೋಕದಿಂದ ನಮ್ಮ ಪ್ರಾರ್ಥನೆಯನ್ನು ಆಲೈಸು; ನಮ್ಮ ಪಾಪಗಳನ್ನು ಕ್ಷಮಿಸು.


ನಿನ್ನ ನಿವಾಸವಾದ ಪರಲೋಕದಿಂದಲೇ ದಯವಿಟ್ಟು ಅವರ ಮೊರೆಯನ್ನು ಆಲಿಸಿ ಅವರ ನ್ಯಾಯವನ್ನು ಸ್ಥಾಪಿಸು.


ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.


ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.


ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು