Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:37 - ಪರಿಶುದ್ದ ಬೈಬಲ್‌

37 “ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:37
20 ತಿಳಿವುಗಳ ಹೋಲಿಕೆ  

ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ಅವರು, ‘ನಮಗೆ ಖಡ್ಗ, ಕಾಯಿಲೆ, ಬರ, ಶಿಕ್ಷೆಗಳಿಂದ ಸಂಕಷ್ಟ ಉಂಟಾದರೆ ನಾವು ನಿನ್ನ ಮತ್ತು ನಿನ್ನ ಆಲಯದೆದುರು ನಿಂತು ನಿನಗೆ ಮೊರೆಯಿಡುವಾಗ ನೀನು ನಮ್ಮ ಮೊರೆಯನ್ನು ಕೇಳಿ ನಮಗೆ ಸಹಾಯ ಮಾಡುವೆ. ನಿನ್ನ ಹೆಸರು ಈ ಆಲಯದ ಮೇಲಿದೆ’ ಎಂದು ಹೇಳಿದರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,


ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು.


ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.


ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು