Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:38 - ಪರಿಶುದ್ದ ಬೈಬಲ್‌

38 ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:38
25 ತಿಳಿವುಗಳ ಹೋಲಿಕೆ  

ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.


ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ. ಆದ್ದರಿಂದ ಹೆರ್ಮೊನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ ಮಿಸ್ಸಾರ್ ಬೆಟ್ಟದಲ್ಲಿಯೂ ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು.


“ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.


ತಮ್ಮ ಸಂಕಟಗಳ ಕುರಿತು ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಮೊರೆಯಿಡುವದಾದರೆ,


ನಾನು ದುರಾವಸ್ಥೆಗೆ ಒಳಗಾಗಿದ್ದೇನೆ. ನನಗೆ ಮರಣವನ್ನು ತರುವ ಈ ದೇಹದಿಂದ ನನ್ನನ್ನು ರಕ್ಷಿಸುವವರು ಯಾರು?


ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ.


“ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.


ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.


ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.


“ಕೆಲವು ಬಾರಿ ಚರ್ಮರೋಗವು ಒಬ್ಬನ ಮೈಯೆಲ್ಲಾ ಹರಡಿಕೊಳ್ಳುವುದು. ಚರ್ಮರೋಗವು ಅವನನ್ನು ತಲೆಯಿಂದ ಅಂಗಾಲಿನವರೆಗೂ ಮುಚ್ಚಿಕೊಳ್ಳುವುದು. ಯಾಜಕನು ಆ ವ್ಯಕ್ತಿಯ ಇಡೀ ದೇಹವನ್ನು ನೋಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು