Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:40 - ಪರಿಶುದ್ದ ಬೈಬಲ್‌

40 ನೀನು ಹೀಗೆ ಮಾಡಿದರೆ, ನೀನು ನಮ್ಮ ಪೂರ್ವಿಕರಿಗೆ ದಯಪಾಲಿಸಿರುವ ಈ ದೇಶದಲ್ಲಿ ಅವರು ವಾಸಿಸುವ ಎಲ್ಲಾ ಕಾಲದಲ್ಲೂ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಗ ನಮ್ಮ ಪಿತೃಗಳಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:40
18 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.


ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.


ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.


ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


“ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.


ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.


“ನಿನ್ನ ನಾಮಮಹತ್ತನ್ನು ಮತ್ತು ಶಕ್ತಿಯನ್ನು ಇತರ ಸ್ಥಳಗಳ ಜನರು ಕೇಳುತ್ತಾರೆ. ಈ ಆಲಯದಲ್ಲಿ ಪ್ರಾರ್ಥಿಸುವುದಕ್ಕಾಗಿ ಅವರು ದೂರದಿಂದ ಬರುತ್ತಾರೆ.


ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು