Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:47 - ಪರಿಶುದ್ದ ಬೈಬಲ್‌

47 ಆ ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, ‘ನಾವು ಪಾಪಮಾಡಿ ದ್ರೋಹಿಗಳಾಗಿದ್ದೇವೆ’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:47
23 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಅಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!


ಒಂದುವೇಳೆ ಅವರು ಪಶ್ಚಾತ್ತಾಪಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ತಾವು ಸೆರೆಯಲ್ಲಿರುವ ದೇಶದಿಂದ ನಿನಗೆ ಮೊರೆಯಿಟ್ಟು, ‘ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ. ನಾವು ದುಷ್ಟತ್ವದಲ್ಲಿ ಜೀವಿಸಿದ್ದೇವೆ’ ಎಂದು ಅರಿಕೆಮಾಡಿ


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಮಾಡುತ್ತಿರುವುದನ್ನು ಯೋಚಿಸಿರಿ!


ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದರೆ. ಅಂಥವನು ಸಾಯದೆ, ಬಾಳುವನು.”


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ನಿನ್ನ ಅಕ್ಕತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಬಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.


ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.


ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.


“ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ತುತಿಸುತ್ತಾರೆ. ಈ ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು