Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:59 - ಪರಿಶುದ್ದ ಬೈಬಲ್‌

59 ನನ್ನ ಈ ಪ್ರಾರ್ಥನೆಯನ್ನು ಮತ್ತು ನಾನು ಕೇಳಿಕೊಂಡವುಗಳನ್ನು ನಮ್ಮ ದೇವರಾದ ಯೆಹೋವನು ಸದಾ ಜ್ಞಾಪಿಸಿಕೊಳ್ಳಲಿ. ಯೆಹೋವನು ತನ್ನ ಸೇವಕನಾದ ರಾಜನಿಗೋಸ್ಕರವಾಗಿಯೂ ತನ್ನ ಜನರಾದ ಇಸ್ರೇಲರಿಗೋಸ್ಕರವಾಗಿಯೂ ಇವುಗಳನ್ನು ಈ ಹೊತ್ತೇ ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ನಾನು ಈಗ ನಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಅವರ ಜ್ಞಾಪಕದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59-60 ಇದಲ್ಲದೆ ಯೆಹೋವ ದೇವರು ತಾವೇ ದೇವರಾಗಿದ್ದಾರೆ. ಅವರ ಹೊರತು ಬೇರೊಬ್ಬರಿಲ್ಲವೆಂದು ಭೂಲೋಕದ ಜನರೆಲ್ಲರೂ ತಿಳಿಯುವ ಹಾಗೆ, ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತಮ್ಮ ಸೇವಕನ ನ್ಯಾಯವನ್ನೂ, ತಮ್ಮ ಜನರಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ, ನಾನು ಯೆಹೋವ ದೇವರ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು, ರಾತ್ರಿ ಹಗಲು ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:59
11 ತಿಳಿವುಗಳ ಹೋಲಿಕೆ  

ಈಗ ನಾನು ಇವರಿಗಾಗಿ ಪ್ರಾರ್ಥಿಸುವೆನು. ಈ ಲೋಕದಲ್ಲಿರುವ ಜನರಿಗೋಸ್ಕರ ನಾನು ಪ್ರಾರ್ಥಿಸುತ್ತಿಲ್ಲ. ಆದರೆ ನೀನು ನನಗೆ ಕೊಟ್ಟ ಇವರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಏಕೆಂದರೆ ಇವರು ನಿನ್ನವರಾಗಿದ್ದಾರೆ.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ನಮ್ಮ ಅನುದಿನದ ಆಹಾರವನ್ನು ನಮಗೆ ದಯಪಾಲಿಸು.


ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”


ಈ ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿರಲು ಆಗ ನಮಗೆ ಸಾಧ್ಯವಾಗುತ್ತದೆ.


ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.


“ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು