Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:65 - ಪರಿಶುದ್ದ ಬೈಬಲ್‌

65 ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:65
29 ತಿಳಿವುಗಳ ಹೋಲಿಕೆ  

ಗಡಿಯು ಅಚ್ಮೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು.


ಆದ್ದರಿಂದ ಇಸ್ರೇಲಿನ ಜನರೆಲ್ಲರೂ ರಾಜನಾದ ಸೊಲೊಮೋನನ ಬಳಿಗೆ ಒಟ್ಟಾಗಿ ಬಂದರು. ಇದು ಏತನೀಮ್ ತಿಂಗಳಿನ (ಆಶ್ವೀಜ) ವಿಶೇಷ ದಿನದಂದು (ಪರ್ಣಶಾಲೆಗಳ ಹಬ್ಬ) ನಡೆಯಿತು. ಇದು ವರ್ಷದ ಏಳನೆಯ ತಿಂಗಳು.


ಹೋರ್ ಬೆಟ್ಟದಿಂದ ಅದು ಲೆಬೊಹಮಾತಿಗೆ ಹೋಗಿ ಅಲ್ಲಿಂದ ಚೆದಾದಿಗೆ ಹೋಗುವುದು.


ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ನೀನು ಇಲ್ಲಿಯವರೆಗೂ ಗೆಬಾಲ್ಯರನ್ನು ಸೋಲಿಸಿಲ್ಲ. ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನ ಪೂರ್ವದಿಂದಿಡಿದು ಲೆಬೊಹಾಮಾತಿನವರೆಗೆ ಇರುವ ಪ್ರದೇಶವನ್ನು ನೀನು ಗೆಲ್ಲಬೇಕು. ಬಾಲ್ಗಾದ್ ಲೆಬನೋನ್ ಪ್ರದೇಶದಲ್ಲಿದೆ.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


“ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.


ಬಂದವರೆಲ್ಲರೂ ಇನ್ನೂ ಏಳು ದಿವಸ ಅಲ್ಲಿಯೇ ಇರಲು ಒಪ್ಪಿಕೊಂಡರು. ಇನ್ನೂ ಏಳು ದಿವಸ ಪಸ್ಕಹಬ್ಬ ಆಚರಿಸಲು ಅವರು ಸಂತೋಷಪಟ್ಟರು.


ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.


ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


ಆ ಸೀಮೆಯು ಈಜಿಪ್ಟಿನ ಅಚ್ಮೋನಿನ ಹಳ್ಳಕ್ಕೆ ಮುಂದುವರೆದು ಮೆಡಿಟರೆನಿಯನ್ ಸಮುದ್ರದವರೆಗೆ ಹಬ್ಬಿತ್ತು. ಈ ಭೂಮಿಯೆಲ್ಲಾ ಅವರ ದಕ್ಷಿಣ ಸೀಮೆಯಲ್ಲಿತ್ತು.


ಈ ಸೀಮೆಯ ಒಳಗಡೆ ಕೆಲವು ಅತಿ ಭದ್ರವಾದ ಪಟ್ಟಣಗಳಿದ್ದವು. ಆ ಪಟ್ಟಣಗಳೆಂದರೆ: ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,


ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.


ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.


ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.


ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.


ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.


“ದಕ್ಷಿಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್-ಕಾದೇಶ್ ನಲ್ಲಿರುವ ನೀರಿನ ಬುಗ್ಗೆಯವರೆಗೂ ಹೋಗುವರು. ಬಳಿಕ ಅಲ್ಲಿಂದ ಹೊರಟು ಈಜಿಪ್ಟಿನ ನೀರಿನ ತೊರೆಯ ಮಾರ್ಗದಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ.


ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.


ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.


ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಕಾನಾನನು ಮೂಲಪಿತೃವಾಗಿದ್ದನು.


ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು