Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:19 - ಪರಿಶುದ್ದ ಬೈಬಲ್‌

19 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು. ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪವಿತ್ರ್ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್, ಸಗ್ಳೆ" ಗೊತ್ತ್ ಅಸಲ್ಲ್ಯಾಚೆ ಶಾನ್‍ಪಾನ್ ಮಿಯಾ ನಾಸ್ ಕರ್‍ತಾ ಅನಿ ಶಾನ್ಯಾಂಚೆ ಶಾನ್‍ಪಾನ್ ಮಿಯಾ ಕಾಯ್ಬಿ ನ್ಹಯ್ ಸರ್ಕೆ ಕರುನ್ ಟಾಕ್ತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:19
9 ತಿಳಿವುಗಳ ಹೋಲಿಕೆ  

ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.


ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ಈ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, “ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ.


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು