Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:28 - ಪರಿಶುದ್ದ ಬೈಬಲ್‌

28 ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28-29 ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜಗ್ ಖಲೆ ಮಹತ್ವಾಚೆ ಮನುನ್ ಚಿಂತಾ ತೆ ನಾಸ್ ಕರುಸಾಟ್ನಿ ಜಗ್ ಖಲೆ ನಕ್ಕೊ ಮನುನ್ ಚಿಂತಾ ತೆ ದೆವಾನ್ ಎಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:28
19 ತಿಳಿವುಗಳ ಹೋಲಿಕೆ  

ಬಲಿಷ್ಠರು ತಪ್ಪು ಮಾಡಿದಾಗ ದೇವರು ಅವರನ್ನು ವಿಚಾರಿಸದೆ ನಾಶಮಾಡಿ ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.


ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ನಿನಗೆ ವಿರುದ್ಧವಾಗಿದ್ದ ಜನರನ್ನು ನೀನು ಹುಡುಕುವೆ. ಆದರೆ ಅವರು ನಿನಗೆ ಕಾಣಿಸುವುದಿಲ್ಲ. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ಕಾಣದೆಹೋಗುವರು.


ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


“ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.


ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.


ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.


ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು