Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:30 - ಪರಿಶುದ್ದ ಬೈಬಲ್‌

30 ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಕಶ್ಯಾಕ್ ಮಟ್ಲ್ಯಾರ್ ದೆವಾಕ್ ಲಾಗುನುಚ್ ತುಮಿ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಹಾಶಿ. ದೆವಾನ್ ಜೆಜು ಕ್ರಿಸ್ತಾಕುಚ್ ಅಮ್ಚೆ ಶಾನ್‍ಪಾನ್ ಕರ್‍ಲ್ಯಾನಾಯ್, ತೆನಿಚ್ ತೆಕಾ ಅಮ್ಚೆ ಭಕ್ತಿಪಾನ್, ಅಮ್ಚೆ ಪವಿತ್ರಪಾನ್ ಅನಿ ಅಮ್ಚಿ ಸುಟ್ಕಾ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:30
76 ತಿಳಿವುಗಳ ಹೋಲಿಕೆ  

ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.


ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.


ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ದೇವರು ತನ್ನ ಜನರಿಗೆ ವಾಗ್ದಾನ ಮಾಡಿದವುಗಳನ್ನು ನಾವು ಹೊಂದಿಕೊಳ್ಳುತ್ತೇವೆ ಎಂಬುದಕ್ಕೆ ಆ ಪವಿತ್ರಾತ್ಮನೇ ಪ್ರಮಾಣವಾಗಿದ್ದಾನೆ. ದೇವರು ಸಂಪಾದಿಸಿಕೊಂಡ ಜನರಿಗೆ ಇದು ಸಂಪೂರ್ಣ ವಿಮೋಚನೆಯನ್ನು ಉಂಟುಮಾಡುತ್ತದೆ. ದೇವರ ಮಹಿಮೆಗೆ ಸ್ತೋತ್ರವಾಗ ಬೇಕೆಂಬುದೇ ಇದೆಲ್ಲದರ ಉದ್ದೇಶವಾಗಿದೆ.


ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ:


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


“ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಬಂದಾತನೇ ಯೇಸು ಕ್ರಿಸ್ತನು. ಯೇಸು ನೀರಿನಿಂದ ಮಾತ್ರವಲ್ಲದೆ ರಕ್ತದಿಂದ ಬಂದನು. ಇದು ನಿಜವೆಂದು ನಮಗೆ ಆತ್ಮನು ತಿಳಿಸುತ್ತಾನೆ. ಏಕೆಂದರೆ ಆತ್ಮನು ಸತ್ಯಸ್ವರೂಪನಾಗಿದ್ದಾನೆ.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.


ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ.


ನನ್ನ ಸಂಬಂಧಿಕರಾದ ಹೆರೋಡಿಯೊನನಿಗೂ ಪ್ರಭುವಿಗೆ ಸೇರಿದವನಾದ ನಾರ್ಕಿಸ್ಸನ ಕುಟುಂಬದಲ್ಲಿರುವವರೆಲ್ಲರಿಗೂ ನನ್ನ ವಂದನೆ ತಿಳಿಸಿರಿ.


ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ.


ಹೀಗೆ ನಮ್ಮಲ್ಲಿ ಅನೇಕರಿದ್ದರೂ ಕ್ರಿಸ್ತನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ನಾವು ಆ ದೇಹದ ಅಂಗಗಳಾಗಿದ್ದೇವೆ. ಆ ದೇಹದ ಪ್ರತಿಯೊಂದು ಅಂಗವು ಇತರ ಅಂಗಗಳಿಗೂ ಸೇರಿಕೊಂಡಿದೆ.


ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.”


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ಜ್ಞಾನವು ಬೀದಿಗಳಲ್ಲಿ ಕೂಗುವ ಸ್ತ್ರೀಯಂತಿದೆ. ಆಕೆಯು ಬಹಿರಂಗ ಸ್ಥಳಗಳಲ್ಲಿ ಕೂಗಿ ಕರೆಯುತ್ತಾಳೆ.


ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು.


ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.


ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’


ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು