Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:7 - ಪರಿಶುದ್ದ ಬೈಬಲ್‌

7 ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗೆ ನೀವು ಯಾವ ಕೃಪಾವರದಲ್ಲಿಯೂ ಕೊರತೆಯಿಲ್ಲದವರಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚೆಸಾಟ್ನಿ ಅಮ್ಚೊ ಧನಿ ಜೆಜು ಕ್ರಿಸ್ತ್ ಅನಿಎಗ್ದಾ ದಿಸ್ತಲ್ಯಾಕ್ ರಾಕುನ್ ಹೊತ್ತ್ಯಾ ತುಮ್ಕಾ ಖಲೊಬಿ ಆತ್ಮಿಕ್ ಆಶಿರ್ವಾದ್ ಗಾವ್ತಲೊ ಚುಕಿ ಸಾರ್ಕೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:7
25 ತಿಳಿವುಗಳ ಹೋಲಿಕೆ  

ನಾವಾದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು.


ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ಆ ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.


ಮನುಷ್ಯಕುಮಾರನು ತಿರುಗಿ ಬರುವಾಗ ಲೋಕದ ಸ್ಥಿತಿ ಅದೇ ರೀತಿಯಲ್ಲಿರುವುದು.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.


ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಮದುವೆಯ ಔತಣದಿಂದ ಮನೆಗೆ ಮರಳಿಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ.


“ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.


“ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”


ನಾನು ಈ ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ಆದರೆ ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ ಎಂಬ ನಿರೀಕ್ಷೆ ನಮಗುಂಟು. ದೇವರಾತ್ಮನ ಸಹಾಯದಿಂದ ಈ ನಿರೀಕ್ಷೆ ಸಫಲವಾಗುವುದೆಂದು ತವಕದಿಂದ ಎದುರುನೋಡುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು