Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:11 - ಪರಿಶುದ್ದ ಬೈಬಲ್‌

11 ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದುಸ್ರ್ಯಾಕ್ನಿ ಎಕ್ ಉದಾರನ್ ಹೊವ್ಕ್ ಸಾಟ್ನಿ ಹೆ ಸಗ್ಳೆ ತೆಂಕಾ ಘಡ್ಲೆ; ಜಗಾಚ್ಯಾ ಕಾಲಾಚ್ಯಾ ಆಕ್ರಿಕ್ ಪಾವಲ್ಲ್ಯಾ ಅಮ್ಕಾ ಉಶ್ಯಾರ್ಕಿ ಸಾಂಗುಸಾಟ್ನಿ ಹೆ ಸಗ್ಳೆ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:11
17 ತಿಳಿವುಗಳ ಹೋಲಿಕೆ  

ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.


ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.


ಆತನು ನಿಜವಾಗಿಯೂ ನಮ್ಮ ಬಗ್ಗೆ ಮಾತಾಡುತ್ತಿದ್ದನು. ಹೌದು, ಪವಿತ್ರ ಗ್ರಂಥವು ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಮತ್ತು ಒಕ್ಕುವವನು ತಮ್ಮ ಕೆಲಸಕ್ಕೆ ಸ್ವಲ್ಪ ಧಾನ್ಯ ದೊರೆಯುತ್ತದೆ ಎಂದು ನಿರೀಕ್ಷಿಸುತ್ತಾರೆ.


ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.


ಆ ಮಾತುಗಳು ಬರೆಯಲ್ಪಟ್ಟಿರುವುದು ಅಬ್ರಹಾಮನಿಗೆ ಮಾತ್ರವಲ್ಲ.


ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.


ಆತನು ಹೀಗೆ ಹೇಳುತ್ತಾನೆ: “ಸ್ವಲ್ಪಕಾಲದಲ್ಲಿಯೇ, ಬರುವಾತನು ಬರುತ್ತಾನೆ. ಆತನು ತಡಮಾಡುವುದಿಲ್ಲ.


ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು.


ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.


“ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ.


“ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.


ಅವರು ಮಾಡಿದಂತೆ ನಾವು ಕೆಟ್ಟವುಗಳನ್ನು ಆಶಿಸಬಾರದೆಂಬುದಕ್ಕೆ ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ.


ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು.


ಆ ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು