Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:4 - ಪರಿಶುದ್ದ ಬೈಬಲ್‌

4 ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಸಗ್ಳ್ಯಾನಿ ಎಕುಚ್ ಆತ್ಮಿಕ್ ಫಿವನ್ ಫಿಲ್ಯಾನಿ. ಅಪ್ನಾಚ್ಯಾ ವಾಂಗ್ಡಾ ವಾಟೆಕ್ ಜಾತಲ್ಯಾ ಮೊಟ್ಯಾ ಗುಂಡ್ಯಾತ್ಲೆ ಪಾನಿ ತೆನಿ ಫಿಲ್ಯಾನಿ. ತೊ ಗುಂಡೊ ಮಟ್ಲ್ಯಾರ್ ಕ್ರಿಸ್ತುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:4
23 ತಿಳಿವುಗಳ ಹೋಲಿಕೆ  

ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.


ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯತೊಡಗಿತು!


ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು.


ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ನೀರನ್ನು ಸಮೃದ್ಧಿಕರವಾಗಿ ಒದಗಿಸಿದನು.


ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.


ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.


ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು.


ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.


ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.


ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ.


ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳು.


ಅವನು, ‘ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು