Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:19 - ಪರಿಶುದ್ದ ಬೈಬಲ್‌

19 (ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮ್ಚ್ಯಾ ಮದ್ದಿ ಭಾಗಾ ಹಾತ್ ಮನ್ತಲಿ ಖಬರ್ ಖರಿ, ಹೆಚ್ಯಾ ವೈನಾ ತುಮ್ಚ್ಯಾತ್ಲೊ ಕೊನ್ ಬರೊ ಮನುನ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:19
19 ತಿಳಿವುಗಳ ಹೋಲಿಕೆ  

ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


ಯಾವನಾದರೂ ಭೇದ ಹುಟ್ಟಿಸುತ್ತಿದ್ದರೆ, ಅವನಿಗೆ ಎಚ್ಚರಿಕೆ ನೀಡು. ಅವನಿನ್ನೂ ಮುಂದುವರಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡು. ಆದರೂ ಅವನು ಕೇಳದೆಹೋದರೆ ಅವನ ಸಹವಾಸವನ್ನು ತೊರೆದುಬಿಡು.


ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.


ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!


ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.


ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಈ ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.


ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,


ಈ ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.


“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.


ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.


ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.


ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು.


ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.


ನೀವೆಲ್ಲರೂ ಒಟ್ಟಾಗಿ ಸೇರಿದಾಗ ನೀವು ಮಾಡುವಂಥದ್ದು ನಿಜವಾಗಿಯೂ ಪ್ರಭುವಿನ ರಾತ್ರಿಭೋಜನವಲ್ಲ.


ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು