Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:2 - ಪರಿಶುದ್ದ ಬೈಬಲ್‌

2 ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀವು ಸದಾ ನನ್ನನ್ನು ಸ್ಮರಿಸಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಸಾಂಪ್ರದಾಯಿಕ ರೀತಿನೀತಿಗಳನ್ನು ಸರಿಯಾಗಿ ಪಾಲಿಸಿಕೊಂಡು ಬರುತ್ತಿದ್ದೀರಿ; ಇದಕ್ಕಾಗಿ ನಿಮ್ಮನ್ನು ಮೆಚ್ಚುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡಿಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ಕನ್ನಾಬಿ ಮಾಜಿ ಯಾದ್ ಕಾಡ್ತ್ಯಾಸಿ ಅನಿ ಮಿಯಾ ತುಮ್ಕಾ ಸಾಂಗಲ್ಲಿ ಪದ್ದತಿಯಾ ತುಮಿ ಸಂಬಾಳುನ್ ಧರ್‍ಲ್ಯಾಸಿ ಮನುನ್ ಮಿಯಾ ತುಮ್ಕಾ ಹೊಗಳ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:2
12 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ.


ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.


ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.


ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.


ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.


ಈಗ ನಾನು ನಿಮಗೆ ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ನಿಮ್ಮ ಸಭಾಕೂಟಗಳು ನಿಮಗೆ ಒಳ್ಳೆಯದನ್ನು ಮಾಡುವುದಕ್ಕಿಂತಲೂ ಹೆಚ್ಚು ಕೇಡುಗಳನ್ನೇ ಮಾಡುತ್ತವೆ.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.


ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು