Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:29 - ಪರಿಶುದ್ದ ಬೈಬಲ್‌

29 ಯಾವನಾದರೂ ಪ್ರಭುವಿನ ದೇಹವೆಂದು ಗುರುತಿಸದೆ ರೊಟ್ಟಿಯನ್ನು ತಿಂದರೆ ಮತ್ತು ದ್ರಾಕ್ಷಾರಸವನ್ನು ಕುಡಿದರೆ ಅವನು ತಿಂದದ್ದಕ್ಕೂ ಕುಡಿದದ್ದಕ್ಕೂ ದೋಷಿಯೆಂಬ ತೀರ್ಪಿಗೆ ಒಳಗಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಆಂಗ್ ಕಾಯ್ ಮನುನ್ ಕಳ್ವುನ್ ಘೆಯ್ ನಸ್ತಾನಾ ಖಾತಾ ಅನಿ ಫಿತಾ, ತೊ ಅಪ್ನಾಚ್ಯಾ ವರ್ತಿಚ್ ಝಡ್ತಿ ಹಾನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:29
11 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ.


ಆದಕಾರಣವೇ, ನಿಮ್ಮ ಸಭೆಯಲ್ಲಿರುವ ಅನೇಕರು ರೋಗಿಗಳೂ ಬಲಹೀನರೂ ಆಗಿದ್ದಾರೆ ಮತ್ತು ಅನೇಕರು ಸತ್ತು ಹೋದರು.


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.


ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.


ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.


ಆದ್ದರಿಂದ ಸರ್ಕಾರಕ್ಕೆ ವಿರೋಧವಾಗಿರುವ ವ್ಯಕ್ತಿಯು ನಿಜವಾಗಿಯೂ ದೇವರ ಆಜ್ಞೆಗೇ ವಿರೋಧವಾಗಿದ್ದಾನೆ. ಸರ್ಕಾರಕ್ಕೆ ವಿರೋಧವಾಗಿರುವ ಜನರು ತಮ್ಮ ಮೇಲೆ ತಾವೇ ದಂಡನೆಯನ್ನು ಬರಮಾಡಿಕೊಳ್ಳುತ್ತಾರೆ.


ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.


ನನ್ನ ಸಹೋದರ ಸಹೋದರಿಯರೇ, ನೀವು ವಾಗ್ದಾನ ಮಾಡುವಾಗ ಆಣೆ ಇಡಬೇಡಿರಿ. ಇದು ಬಹಳ ಮುಖ್ಯವಾದದ್ದು. ನಿಮ್ಮ ಹೇಳಿಕೆಯನ್ನು ನಿರೂಪಿಸಲು ಪರಲೋಕದ, ಭೂಲೋಕದ ಮತ್ತು ಬೇರಾವುದರ ಹೆಸರನ್ನೂ ಬಳಸಬೇಡಿ. ಹೌದಾಗಿದ್ದರೆ, “ಹೌದು” ಎನ್ನಿರಿ. ಇಲ್ಲವಾಗಿದ್ದರೆ, “ಇಲ್ಲ” ಎನ್ನಿರಿ. ನೀವು ಹೀಗೆ ಮಾಡಿದರೆ, ನಿಮಗೆ ದೋಷಿಗಳೆಂಬ ತೀರ್ಪಾಗುವುದಿಲ್ಲ.


ಮನುಷ್ಯಕುಮಾರನು ಬಂದನು. ಅವನು ಇತರ ಜನರಂತೆ ಊಟಮಾಡುತ್ತಾನೆ ಮತ್ತು ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ನೀವು, ‘ನೋಡಿರಿ! ಅವನೊಬ್ಬ ಹೊಟ್ಟೆಬಾಕ, ಕುಡುಕ! ಸುಂಕವಸೂಲಿಗಾರರು ಮತ್ತು ಇತರ ಕೆಟ್ಟಜನರೇ ಅವನ ಸ್ನೇಹಿತರು!’ ಎನ್ನುತ್ತೀರಿ.


ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು