Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:28 - ಪರಿಶುದ್ದ ಬೈಬಲ್‌

28 ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಿ ದೆವಾನ್ ನೆಮಲ್ಲೆ ಕೊನ್ ಮಟ್ಲ್ಯಾರ್ ತೆನಿ ಹೆ: ಪೈಲೆಚೆ ಅಪೊಸ್ತಲಾ, ದೊನ್ವೆಚೆ ಪ್ರವಾದಿ, ತಿನ್ವೆಚಿ ಶಿಕ್ವುತಲಿ ಲೊಕಾ; ಹೆಂಚ್ಯಾ ಮಾನಾ ವಿಚಿತ್ರ್ ಕಾಮಾ ಕರ್‍ತಲೆ, ಪಿಡಾ ಗುನ್ ಕರ್‍ತಲೆ, ದುಸ್ರ್ಯಾಂಚಿ ಸೆವಾ ಕರ್‍ತಲೆ, ಅಧಿಕಾರ್ ಚಾಲ್ವುತಲೆ ಅನಿ ದುಸ್ರಿ ದುಸ್ರಿ ಬಾಶಾ ಬೊಲ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:28
23 ತಿಳಿವುಗಳ ಹೋಲಿಕೆ  

ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ.


ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.


ನಿಮ್ಮ ಸಭಾನಾಯಕರಿಗೆಲ್ಲ ಮತ್ತು ದೇವಜನರಿಗೆಲ್ಲ ನಮ್ಮ ವಂದನೆಗಳನ್ನು ತಿಳಿಸಿ. ಇಟಲಿಯ ದೇವಜನರೆಲ್ಲರೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.


ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,


ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.


ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.


ಎಲ್ಲಾ ಜನರು ಅಪೊಸ್ತಲರುಗಳಲ್ಲ. ಎಲ್ಲಾ ಜನರು ಪ್ರವಾದಿಗಳಲ್ಲ. ಎಲ್ಲಾ ಜನರು ಉಪದೇಶಕರುಗಳಲ್ಲ. ಎಲ್ಲಾ ಜನರು ಅದ್ಭುತಕಾರ್ಯಗಳನ್ನು ಮಾಡುವುದಿಲ್ಲ.


ಎಲ್ಲಾ ಜನರು ಗುಣಪಡಿಸುವ ವರವನ್ನು ಹೊಂದಿಲ್ಲ. ಎಲ್ಲಾ ಜನರು ವಿವಿಧ ಭಾಷೆಗಳನ್ನು ಮಾತಾಡುವುದಿಲ್ಲ. ಎಲ್ಲಾ ಜನರು ಆ ಭಾಷೆಗಳನ್ನು ಅನುವಾದಿಸುವುದಿಲ್ಲ.


ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ.


ಪರಭಾಷೆಯಲ್ಲಿ ಮಾತಾಡುವ ವ್ಯಕ್ತಿಯು ತನಗೆ ಮಾತ್ರ ಸಹಾಯ ಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಇಡೀ ಸಭೆಗೆ ಸಹಾಯ ಮಾಡುತ್ತಾನೆ.


ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು