Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:4 - ಪರಿಶುದ್ದ ಬೈಬಲ್‌

4 ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-6 ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪ್ರೆಮ್ ಸೊಸುನ್‍ ಘೆವ್ನ್ ಜಾತಾ, ಪ್ರೆಮ್ ದಯಾಳ್, ಅನಿಎಕ್ಲ್ಯಾಕ್ ಬಗುನ್ ಜಳಿ ನಾ, ಅಪ್ನಾಚಿಚ್ ಬಡಾಯ್ ಬೊಲಿನಾ, ಗರುಕಿನ್ ಭರಿನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:4
53 ತಿಳಿವುಗಳ ಹೋಲಿಕೆ  

ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.


ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.


ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಪ್ರೀತಿಯು ಎಲ್ಲಾ ತಪ್ಪುಗಳನ್ನು ಕ್ಷಮಿಸುತ್ತದೆ.


ಪ್ರಿಯ ಸ್ನೇಹಿತರೇ, ಹೀಗೆ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ಆದ್ದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು.


ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;


ದೇವರ ಸೇವೆಗೆ ಸಹೋದರ ಸ್ನೇಹವನ್ನೂ ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಸೇರಿಸಿರಿ


ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ


ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ನಾವು ಅಹಂಕಾರಿಗಳಾಗಬಾರದು, ಒಬ್ಬರನ್ನೊಬ್ಬರು ಕೆಣಕುವವರಾಗಬಾರದು, ಒಬ್ಬರಮೇಲೊಬ್ಬರು ಮತ್ಸರ ಉಳ್ಳವರಾಗಬಾರದು.


ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ಈ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, “ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ.


ಆಕೆಯು ಜ್ಞಾನದಿಂದ ಮಾತಾಡುವಳು; ಪ್ರೀತಿಯಿಂದ ಸದುಪದೇಶ ಮಾಡುವಳು.


ಆಕೆ ಯಾವಾಗಲೂ ಬಡವರಿಗೆ ಕೊಡುವಳು; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು.


ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ರಂಧ್ರಕ್ಕೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


“ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.


ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ನಿಮ್ಮಲ್ಲಿ ಕೆಲವರು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ನಾನು ನಿಮ್ಮ ಬಳಿಗೆ ಮತ್ತೆ ಬರುವುದಿಲ್ಲವೆಂದು ಯೋಚಿಸಿ, ನೀವು ಜಂಬಪಡುತ್ತಿದ್ದೀರಿ.


ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ.


ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.


ಆದರೆ ನೀವು ನಿಮ್ಮ ವಿಷಯದಲ್ಲಿ ಇನ್ನೂ ಹೆಚ್ಚಳಪಡುತ್ತಿದ್ದೀರಿ. ನೀವು ದುಃಖಭರಿತರಾಗಿರಬೇಕಿತ್ತು. ಆ ಪಾಪ ಮಾಡಿದ ವ್ಯಕ್ತಿಯನ್ನು ನಿಮ್ಮ ಸಭೆಯಿಂದ ಹೊರಗೆ ಹಾಕಬೇಕಿತ್ತು.


ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.


ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು