Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:9 - ಪರಿಶುದ್ದ ಬೈಬಲ್‌

9 ಏಕೆಂದರೆ ನಮಗಿರುವ ಈ ಜ್ಞಾನವು ಮತ್ತು ಈ ಪ್ರವಾದನೆಗಳು ಸಂಪೂರ್ಣವಾದುವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್ ಅಮ್ಚೆ ಶಾನ್‍ಪಾನ್ ಸಂಪುರ್ನ್ ನ್ಹಯ್, ಅನಿ ಅಮ್ಚೊ ಪ್ರವಾದ್‍ ಬಾರಿಕ್ ಭಾಗ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:9
16 ತಿಳಿವುಗಳ ಹೋಲಿಕೆ  

ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ.


ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?


ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಪವಿತ್ರ ಗ್ರಂಥ ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ದೇವರಿಗೆ ಸಲಹೆಯನ್ನು ಯಾರು ಕೊಡಬಲ್ಲರು?”


ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”


ಆದರೆ ಸಂಪೂರ್ಣತೆಯು ಬಂದಾಗ ಸಂಪೂರ್ಣವಲ್ಲದವುಗಳು ಕೊನೆಗೊಳ್ಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು