Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:21 - ಪರಿಶುದ್ದ ಬೈಬಲ್‌

21 ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ವಿವಿಧ ಭಾಷೆಗಳನ್ನು ಮಾತಾಡುವವರ ಮೂಲಕವೂ ವಿದೇಶಿಯರ ನಾಲಿಗೆಯ ಮೂಲಕವೂ ನಾನು ಈ ಜನರೊಂದಿಗೆ ಮಾತಾಡುವೆನು; ಆದರೂ ಇವರು ನನಗೆ ವಿಧೇಯರಾಗುವುದಿಲ್ಲ.” ಪ್ರಭುವು ಹೇಳುವುದು ಅದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪವಿತ್ರಗ್ರಂಥದಲ್ಲಿ ಇಂತಿದೆ: ಅನ್ಯಭಾಷೆಯವರ ಮುಖಾಂತರ ಅನ್ಯದೇಶೀಯರ ಬಾಯ ಮುಖಾಂತರ ನಾನೆನ್ನ ಜನರೊಡನೆ ಮಾತಾಡಿದಾಗಲೂ ಎನ್ನ ಮಾತಿಗೆ ಕಿವಿಗೊಡರವರು, ಎಂದರು ಪ್ರಭು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅನ್ಯಭಾಷೆಯವರ ಮೂಲಕವಾಗಿಯೂ ಪರದೇಶಸ್ಥರ ನಾಲಿಗೆಯಿಂದಲೂ ನಾನು ಈ ಜನರ ಸಂಗಡ ಮಾತಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಕೊಡುವದಿಲ್ಲವೆಂದು ಕರ್ತನು ಹೇಳುತ್ತಾನೆಂಬದಾಗಿ ಧರ್ಮಶಾಸ್ತ್ರದಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಬೇರೆಭಾಷೆಯವರ ಮೂಲಕವಾಗಿಯೂ ವಿದೇಶದವರ ತುಟಿಗಳಿಂದಲೂ ನಾನು ಈ ಜನರೊಡನೆ ಮಾತಾಡುವೆನು, ಆದರೂ ಅವರು ನನಗೆ ಕಿವಿಗೊಡುವುದಿಲ್ಲವೆಂದು ಕರ್ತದೇವರು ಹೇಳುತ್ತಾರೆ,” ಎಂದು ನಿಯಮದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪವಿತ್ರ್ ಖಾಯ್ದ್ಯಾಚ್ಯಾ ಪುಸ್ತಕಾತ್ ಲಿವಲ್ಲೆ ಹಾಯ್, “ದುಸ್ರ್ಯಾ ಬಾಶಾತ್ನಿ ಬೊಲ್ತಲ್ಯಾ ಲೊಕಾಂಚ್ಯಾ ಹೊಟ್ಟಾನಿ ಮಿಯಾ ಹ್ಯಾ ಲೊಕಾಂಚ್ಯಾಕ್ಡೆ ಬೊಲ್ತಾ; ಜಾಲ್ಯಾರ್ಬಿ ತೆನಿ ಮಾಕಾ ಆಯ್ಕಿನಾತ್.” ಮನ್ತಾ ಧನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:21
7 ತಿಳಿವುಗಳ ಹೋಲಿಕೆ  

“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.


ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ಅದಕ್ಕೆ ಯೇಸು, “ನಿಮ್ಮ ಧರ್ಮಶಾಸ್ತ್ರದಲ್ಲಿ, ‘ನಾನು ನಿಮ್ಮನ್ನು ದೇವರುಗಳೆಂದು ಹೇಳಿದೆನು’ ಎಂಬುದಾಗಿ ಬರೆದಿದೆ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು