1 ಕೊರಿಂಥದವರಿಗೆ 15:23 - ಪರಿಶುದ್ದ ಬೈಬಲ್23 ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ಹರಿ ಎಕ್ಲ್ಯಾಕ್ ತೆಂಚ್ಯಾ-ತೆಂಚ್ಯಾ ಪಾಳಿ ಪರ್ಕಾರ್ ಸಗ್ಳ್ಯಾಕ್ನಿ ಎಕ್ ಜಾಮಿನ್ ಸರ್ಕೆ ಕ್ರಿಸ್ತಾಕ್; ಅನಿ ಮಾನಾ ಕ್ರಿಸ್ತ್ ಯೆತಲ್ಯಾ ಎಳಾರ್, ಕ್ರಿಸ್ತಾಚ್ಯಾ ಎಕ್ವಟ್ಟಾತ್ ಹೊತ್ತ್ಯಾ ಸಗ್ಳ್ಯಾಕ್ನಿ ಝಿತ್ತೆ ಕರುನ್ ಉಟ್ವುನ್ ಹೊತಾ. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”