Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:29 - ಪರಿಶುದ್ದ ಬೈಬಲ್‌

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವದೇ ಇಲ್ಲವೆಂಬದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ತಲೆ ನಾ ಹೊಲ್ಯಾರ್, ಮರಲ್ಲ್ಯಾಂಚ್ಯಾಸಾಟ್ನಿ ಬಾಲ್ತಿಮ್ ಘೆತ್ಯಾತ್ ಕಿ, ತೆ ಕಾಯ್ ಕಾಮಾಕ್? ಮರಲ್ಲೆ ಝಿತ್ತೆ ಹೊವ್ನ್ ಉಟಿನಾತ್ ಹೊಲ್ಯಾರ್, ಲೊಕಾ ತೆಂಚೆಸಾಟ್ನಿ ಕಸ್ಲ್ಯಾ ಫಾಯ್ದ್ಯಾಸಾಟ್ನಿ ಬಾಲ್ತಿಮ್ ಘೆತ್ಯಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:29
7 ತಿಳಿವುಗಳ ಹೋಲಿಕೆ  

ಸತ್ತುಹೋದ ಜನರು ಎಬ್ಬಿಸಲ್ಪಡದಿದ್ದರೆ, ಕ್ರಿಸ್ತನು ಸಹ ಎಬ್ಬಿಸಲ್ಪಡಲೇ ಇಲ್ಲ.


ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.


ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”


ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.


ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು.


ನಮ್ಮ ವಿಷಯವೇನು? ನಾವು ನಮ್ಮನ್ನು ಪ್ರತಿ ತಾಸಿನಲ್ಲಿಯೂ ಅಪಾಯಕ್ಕೆ ಒಡ್ಡುವುದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು