Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:35 - ಪರಿಶುದ್ದ ಬೈಬಲ್‌

35 “ಸತ್ತವರು ಹೇಗೆ ಎದ್ದುಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?” ಎಂದು ಕೆಲವರು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸತ್ತವರು ಹೇಗೆ ಎಬ್ಬಿಸಲ್ಪಡುತ್ತಾರೆ, ಎಂಥ ದೇಹದಿಂದ ಬರುತ್ತಾರೆ ಎಂದು ಒಬ್ಬನು ಕೇಳಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಸತ್ತವರು ಎದ್ದೇಳುವುದು ಹೇಗೆ? ಎಂಥ ದೇಹದಿಂದ ಎದ್ದು ಬರುತ್ತಾರೆ?” ಎಂದು ಯಾರಾದರೂ ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅತ್ತಾ ಕೊನ್ಬಿ ಎಕ್ಲೊ ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲೆ ಮಟ್ಲ್ಯಾರ್ ಕಶೆ ತೆ? ಕಸ್ಲೆ ಆಂಗ್ ಘೆವ್ನ್ ತೆನಿ ಝಿತ್ತೆ ಹೊವ್ನ್ ಯೆತ್ಯಾತ್? ಇಚಾರುಕ್ಬಿ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:35
13 ತಿಳಿವುಗಳ ಹೋಲಿಕೆ  

ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು.


“ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಜನರು, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.


ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿದಿಲ್ಲವೋ ಅದೇರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಅರಿತುಕೊಳ್ಳಲಾರೆ.


“ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.


ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ?


ಕಾಡುಕತ್ತೆಯು ಮನುಷ್ಯನನ್ನು ಹೇಗೆ ಹೆರಲಾರದೋ ಅದೇ ರೀತಿಯಲ್ಲಿ ದಡ್ಡನು ಎಂದಿಗೂ ಜ್ಞಾನಿಯಾಗಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು