Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:7 - ಪರಿಶುದ್ದ ಬೈಬಲ್‌

7 ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಿಯಾ ಪರ್‍ಚಾರ್ ಕರ್‍ತಲೆ ಹೆ ಶಾನ್‍ಪಾನ್ ದೆವಾಚೆ ಅನಿ ಗುಟಾನ್ ಥವಲ್ಲೆ, ತೆನಿ ಹ್ಯೊ ಜಗ್ ಕರುಚ್ಯಾ ಅದ್ದಿಚ್ ಅಮ್ಚ್ಯಾ ಮಹಿಮೆಸಾಟ್ನಿ ಅದ್ದಿಚ್‍ ಎಚುನ್ ಕಾಡಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:7
21 ತಿಳಿವುಗಳ ಹೋಲಿಕೆ  

ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು.


ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.”


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.


ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.


ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.


ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.


ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು