Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:17 - ಪರಿಶುದ್ದ ಬೈಬಲ್‌

17 ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವನಾದರೂ ದೇವರ ಆಲಯವನ್ನು ಕೆಡಿಸಿದರೆ ದೇವರು ಅವನನ್ನು ಕೆಡಿಸುವನು. ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆ ಕೊನ್ ದೆವಾಚಿ ಗುಡಿ ನಾಸ್ ಕರ್‍ತಾ ತ್ಯಾ ಮಾನ್ಸಾಕ್ ದೆವ್ ನಾಸ್ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಗುಡಿ ಪವಿತ್ರ್ ಅನಿ ತುಮಿ ಹಿ ಗುಡಿ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:17
19 ತಿಳಿವುಗಳ ಹೋಲಿಕೆ  

ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ.


ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು. ಆ ಪರದೇಶಿಯರು ನನ್ನ ಅಮೂಲ್ಯವಾದ ಆಲಯವನ್ನು ಹೊಲಸು ಮಾಡುವರು. ದರೋಡೆಕೋರರು ಅದರೊಳಗೆ ನುಗ್ಗಿ ಅದಕ್ಕೆ ಅಪಮಾನ ಮಾಡುವರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.


“ಅಶುದ್ಧನಾಗಿದ್ದರೂ ತನ್ನನ್ನು ಶುದ್ಧಮಾಡಿಕೊಳ್ಳದವನು ಯೆಹೋವನ ಗುಡಾರವನ್ನು ಅಶುದ್ಧಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.


ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.


“ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.”


ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.


ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.


ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!


ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.


ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.


ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.


ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.


ನೀವೇ ದೇವರ ಆಲಯವಾಗಿದ್ದೀರಿ. ಇದು ನಿಮಗೆ ಚೆನ್ನಾಗಿ ತಿಳಿದಿದೆ. ದೇವರಾತ್ಮನು ನಿಮ್ಮೊಳಗೆ ವಾಸವಾಗಿದ್ದಾನೆ.


ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು