Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:11 - ಪರಿಶುದ್ದ ಬೈಬಲ್‌

11 ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಗಳಿಗೆಯವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ಮೈಗೆ ವಸ್ತ್ರವಿಲ್ಲದವರೂ ಗುದ್ದು ತಿನ್ನುವವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಜುನ್ ಪತರ್ ಅಮಿ ಭುಕೆನ್ ಅನಿ ಸೊಸೆನ್ ರ್‍ಹಾತಾಂವ್, ಕಪ್ಡೆ ನಸ್ತಾನಾ ಹಾಂವ್ ಮಾರ್ ಖಾತಾಂವ್ ಅನಿ ಘರ್-ದಾರ್ ನಸ್ತಾನಾ ಗಾಂವಾತ್ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:11
13 ತಿಳಿವುಗಳ ಹೋಲಿಕೆ  

ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!


ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ.


ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.


ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.


ಊಟಮಾಡುವುದಕ್ಕೆ ಮತ್ತು ಪಾನೀಯಗಳನ್ನು ಕುಡಿಯುವುದಕ್ಕೆ ನಮಗೆ ಹಕ್ಕಿಲ್ಲವೇ?


ಪ್ರಧಾನಯಾಜಕನಾದ ಅನನೀಯನು ಅಲ್ಲಿದ್ದನು. ಪೌಲನು ಹೇಳಿದ್ದನ್ನು ಕೇಳಿದ ಅನನೀಯನು ಪೌಲನ ಪಕ್ಕದಲ್ಲಿ ನಿಂತಿದ್ದವರಿಗೆ ಪೌಲನ ಬಾಯಿಯ ಮೇಲೆ ಹೊಡೆಯಲು ಹೇಳಿದನು.


ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲ ಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.


ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು