Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:12 - ಪರಿಶುದ್ದ ಬೈಬಲ್‌

12 ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನೆಯಿಲ್ಲದವರೂ ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಬೈಸಿಕೊಂಡು ಹರಸುತ್ತೇವೆ; ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ; ಅಪಕೀರ್ತಿಹೊಂದಿ ಆದರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸ್ವಂತ ಕೈಯಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸಿಕೊಂಡು ಆಶೀರ್ವದಿಸುತ್ತೇವೆ, ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಾಮ್ ಕರುನ್ ಅಮ್ಚ್ಯಾ ಸ್ವತಾಚಿ ಪೊಟಾ ಭರುನ್ ಘೆತಾಂವ್. ಅಮ್ಚ್ಯಾ ವೈರ್ ಸರಾಪ್ ಮಾಗ್ತಲ್ಯಾಕ್ನಿ ಬರೆ ಮಾಗುನ್ ಆಶಿರ್ವಾದ್ ದಿತಾಂವ್, ಅಮ್ಕಾ ಗಾವ್ತಲೊ ತರಾಸ್ ಖುಶಿನ್ ಸೊಸ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:12
23 ತಿಳಿವುಗಳ ಹೋಲಿಕೆ  

ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.


ನಿಮಗೆ ಕೇಡುಮಾಡುವವರನ್ನು ಶಪಿಸದೆ ಆಶೀರ್ವದಿಸಿರಿ.


ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.”


ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ.


ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.


ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.


ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.


ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ಬಾರ್ನಬನು ಮತ್ತು ನಾನು ಮಾತ್ರ ನಮ್ಮ ಜೀವನಕ್ಕೆ ಬೇಕಾದದ್ದನ್ನು ದುಡಿದು ಸಂಪಾದಿಸಿಕೊಳ್ಳಬೇಕೇ?


ನಾನು ಯಾವಾಗಲೂ ನನ್ನ ಅಗತ್ಯತೆಗಳನ್ನು ಮತ್ತು ನನ್ನೊಂದಿಗಿರುವವರ ಅಗತ್ಯತೆಗಳನ್ನು ಪೂರೈಸುವುದಕ್ಕಾಗಿ ದುಡಿಯುತ್ತಿದ್ದೆನು ಎಂಬುದು ನಿಮಗೆ ಗೊತ್ತಿದೆ.


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!


ನಾನು ಇತರ ಸಭೆಗಳಿಂದ ನಿಮ್ಮ ಮಧ್ಯದಲ್ಲಿ ಸೇವೆ ಮಾಡುವುದಕ್ಕಾಗಿ ಹಣವನ್ನು ತೆಗೆದುಕೊಂಡೆನು.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು