Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:21 - ಪರಿಶುದ್ದ ಬೈಬಲ್‌

21 ನೀವು ಯಾವುದನ್ನು ಇಷ್ಟಪಡುತ್ತೀರಿ? ನಾನು ಬೆತ್ತವನ್ನು ತೆಗೆದುಕೊಂಡು ಬರಬೇಕೇ? ಅಥವಾ ಪ್ರೀತಿ ಮತ್ತು ಸೌಮ್ಯಭಾವಗಳಿಂದ ಕೂಡಿದವನಾಗಿ ಬರಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬೆತ್ತವನ್ನು ಹಿಡಿದು ಬಿಗಿಯಲು ಬರಲೋ? ಅಥವಾ ಪ್ರೀತಿ ಸಹಾನುಭೂತಿಯಿಂದ ತುಂಬಿದವನಾಗಿ ಬರಲೋ? ನಿಮಗೆ ಯಾವುದು ಇಷ್ಟ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಶಿಸ್ತಿನ ಬೆತ್ತವನ್ನು ಹಿಡಿದು ಬಿಗಿಯಲು ನಿಮ್ಮ ಬಳಿ ಬರಲೋ? ಅಥವಾ ಪ್ರೀತಿ ಸೌಮ್ಯದಿಂದ ಬರಲೋ? ನಿಮಗೆ ಯಾವುದು ಇಷ್ಟ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತರ್ ತುಮ್ಕಾ ಖಲೆ ಪಾಜೆ? ಮಿಯಾ ತುಮ್ಚ್ಯಾಕ್ಡೆ ಬೆತ್ತಾಚಿ ಖಾಟಿ ಘೆವ್ನ್ ಯೆವ್ಚೆ ಕಾಯ್? ಪ್ರೆಮಾನ್ ಅನಿ ಥಂಡ್ ಮನಾನ್ ಯೆವ್ಚೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:21
16 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಬಳಿಗೆ ಎರಡನೆ ಸಲ ಬಂದಿದ್ದಾಗ ಪಾಪಕ್ಕೆ ಒಳಗಾಗಿದ್ದವರನ್ನು ಮತ್ತು ಉಳಿದವರೆಲ್ಲರನ್ನು ಎಚ್ಚರಿಸಿದೆನು. ಈಗ ನಾನು ದೂರದಲ್ಲಿದ್ದೇನೆ. ಈ ಪಾಪಕ್ಕೆ ಒಳಗಾಗಿರುವ ಎಲ್ಲರಿಗೂ ನಾನು ಕೊಡುವ ಎಚ್ಚರಿಕೆ ಏನೆಂದರೆ, ನಾನು ನಿಮ್ಮ ಬಳಿಗೆ ಬಂದಾಗ, ನಿಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು.


ನಾವು ಕ್ರಿಸ್ತನ ಅಪೊಸ್ತಲರಾಗಿ ನಿಮ್ಮೊಡಗಿದ್ದಾಗ, ನಿಮ್ಮಿಂದ ದುಡಿಸಿಕೊಳ್ಳಲು ನಮ್ಮ ಅಧಿಕಾರವನ್ನು ಬಳಸಬಹುದಾಗಿತ್ತು. ಆದರೆ ನಿಮ್ಮೊಡನೆ ಬಹಳ ಸಾತ್ವಿಕರಾಗಿದ್ದೆವು. ತಾಯಿಯು ತನ್ನ ಸ್ವಂತ ಚಿಕ್ಕ ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ನಾವು ನಡೆದುಕೊಂಡೆವು.


ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ.


ನಾನು ನಿಮ್ಮ ಬಳಿಗೆ ಬಂದಾಗ, ನನ್ನನ್ನು ಸಂತೋಷಗೊಳಿಸಬೇಕಾದ ಜನರಿಂದಲೇ ನನಗೆ ದುಃಖವಾಗಬಾರದೆಂಬ ಉದ್ದೇಶದಿಂದ ನಾನು ನಿಮಗೆ ಈ ಪತ್ರವನ್ನು ಬರೆದೆನು. ನೀವೆಲ್ಲರೂ ನನ್ನ ಆನಂದದಲ್ಲಿ ಪಾಲುಗಾರರಾಗುತ್ತೀರಿ ಎಂಬ ಭರವಸೆ ನನಗಿತ್ತು.


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ನಿಮ್ಮಲ್ಲಿ ಕ್ರಿಸ್ತನಿಗೆ ವಿಧೇಯರಾಗದಿರುವ ಯಾರನ್ನೇ ಆಗಲಿ ಶಿಕ್ಷಿಸಲು ಸಿದ್ಧರಾಗಿದ್ದೇವೆ. ಆದರೆ ಮೊಟ್ಟಮೊದಲನೆಯದಾಗಿ, ನೀವು ಪೂರ್ಣ ವಿಧೇಯರಾಗಬೇಕೆಂದು ಅಪೇಕ್ಷಿಸುತ್ತೇವೆ.


ಆದ್ದರಿಂದ ನಾನು ನಿಮಗೆ ನೀಡಲಿರುವ ಮುಂದಿನ ಸಂದರ್ಶನವು ನಿಮಗೆ ದುಃಖವನ್ನು ಉಂಟುಮಾಡುವ ಸಂದರ್ಶನವಾಗಿರಬಾರದೆಂದು ನಿರ್ಧರಿಸಿದೆನು.


ಪ್ರಭುವು ನಮಗೆ ಕೊಟ್ಟಿರುವ ಅಧಿಕಾರದ ಬಗ್ಗೆ ನಾವು ಹೆಚ್ಚು ಹೆಮ್ಮೆಪಡುತ್ತೇವೆ ಎಂಬುದೇನೋ ಸತ್ಯ. ಆದರೆ ಆತನು ನಮಗೆ ಈ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಪಡಿಸುವುದಕ್ಕಾಗಿಯೇ ಹೊರತು ನಿಮಗೆ ನೋವನ್ನು ಉಂಟುಮಾಡುವುದಕ್ಕಾಗಿಯಲ್ಲ. ಆದ್ದರಿಂದ ಅದರ ಬಗ್ಗೆ ಹೆಮ್ಮೆಪಡುವುದರಲ್ಲಿ ನಾನು ನಾಚಿಕೊಳ್ಳುವುದಿಲ್ಲ.


ಆ ಹಳೆ ಸೇವೆಯು ಮಹಿಮೆಯನ್ನು ಹೊಂದಿತ್ತು. ಆದರೆ ಅದು ಹೊಸ ಸೇವೆಯ ಎದುರಿನಲ್ಲಿ ಮಹಿಮೆಯಿಲ್ಲದ್ದಾಯಿತು.


ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು.


ನಿಮ್ಮಲ್ಲಿ ಕೆಲವರು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ನಾನು ನಿಮ್ಮ ಬಳಿಗೆ ಮತ್ತೆ ಬರುವುದಿಲ್ಲವೆಂದು ಯೋಚಿಸಿ, ನೀವು ಜಂಬಪಡುತ್ತಿದ್ದೀರಿ.


ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು