Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:4 - ಪರಿಶುದ್ದ ಬೈಬಲ್‌

4 ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನಲ್ಲಿ ದೋಷವಿದೆಯೆಂದು ನನ್ನ ಬುದ್ಧಿಗೆ ತೋರುವದಿಲ್ಲವಾದರೂ ದೋಷವಿಲ್ಲದವನೆಂಬ ನಿರ್ಣಯವು ಇದರಿಂದಾಗುವದಿಲ್ಲ; ನನ್ನನ್ನು ವಿಚಾರಣೆಮಾಡುವವನು ಕರ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಮನಸ್ಸಾಕ್ಷಿಯು ಶುದ್ಧವಾಗಿದೆ. ಆದರೆ ಅದು ನನ್ನನ್ನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯತೀರಿಸುವವರು ಕರ್ತದೇವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜೊ ಭುತ್ತುರ್‍ಲೊ ಮನ್ ಮಾಜ್ಯಾ ವೈರ್ ಚುಕ್ ವಾವಿನಾ, ಹೆ ಖರೆ ಜಾಲ್ಯಾರ್ಬಿ ಮಿಯಾ ಚುಕ್ ನಸ್ತಾನಾ ಹಾಂವ್ ಮನುಕ್ ಹೊಯ್ನಾ. ಮಾಜಿ ಝಡ್ತಿ ಕರ್‍ತಲೊ ಎಕ್ಲೊಚ್ ತೊ ಧನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:4
24 ತಿಳಿವುಗಳ ಹೋಲಿಕೆ  

ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.


ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.


“ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ.


ನನ್ನ ನೀತಿಯನ್ನು ಬಲವಾಗಿ ಹಿಡಿದುಕೊಳ್ಳುವೆನು; ಅದನ್ನೆಂದಿಗೂ ಬಿಟ್ಟುಕೊಡೆನು. ನಾನು ಜೀವದಿಂದಿರುವತನಕ ನನ್ನ ಮನಸ್ಸಾಕ್ಷಿಯು ನನ್ನನ್ನು ಕಾಡಿಸುವುದೇ ಇಲ್ಲ.


ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.


ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


“ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ?


ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.


ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ.


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.


ಅನೇಕರು ಅಧಿಪತಿಯಿಂದ ಸಹಾಯ ಬಯಸುವರು. ಆದರೆ ನ್ಯಾಯ ದೊರೆಯುವುದು ಯೆಹೋವನಿಂದಲೇ.


ನೀವೇ ನನಗೆ ವಿಚಾರಣೆ ಮಾಡಿದರೂ ಯಾವುದೇ ಮಾನವ ನೇಮಿತ ನ್ಯಾಯಾಲಯದಲ್ಲಿ ನನಗೆ ವಿಚಾರಣೆಯಾದರೂ ನಾನು ಚಿಂತಿಸುವುದಿಲ್ಲ. ಅಲ್ಲದೆ ನನಗೆ ನಾನೇ ವಿಚಾರಣೆ ಮಾಡಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು