Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:11 - ಪರಿಶುದ್ದ ಬೈಬಲ್‌

11 ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಬೈಯುವವನಾದರೂ ಕುಡಿಕನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟಮಾಡಲೂಬಾರದು ಎಂದು ಬರೆದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾಜ್ಯಾಸಾಟ್ನಿ ಮಿಯಾ ತುಮ್ಕಾ ಸಾಂಗುಚೆ ಮನುನ್ ಹೊತ್ತೆ ಯವ್ಡೆಚ್! ಕೊನ್‍ತರ್ ಎಕ್ಲೊ ಅಪ್ನಿ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ಘೆವ್ನ್ ವೆಭಿಚಾರ್ ಕರ್‍ತಾ, ಆಸ್‍ಬುರ್‍ಕೆಪಾನಾತ್ ರ್‍ಹಾತಾ, ಮುರ್ತಿ ಫುಜಾ ಕರ್‍ತಾ, ನಾ ಹೊಲ್ಯಾರ್ ದುಸ್ರ್ಯಾಂಚೆ ನಾಂವ್ ವೈಟ್ ಕರುಕ್ ಬಗ್ತಾ, ಲೈ ಫಿತಾ, ಲುಟುನ್ ಖಾತಾ, ತಸ್ಲ್ಯಾಂಚಿ ತುಮಿ ಫಾಟ್ ಧರುಚೆ ನ್ಹಯ್; ತಸ್ಲ್ಯಾಂಚ್ಯಾ ವಾಂಗ್ಡಾ ತುಮಿ ಜೆವ್ನಾಕ್ ಸೈತ್ ಬಸುಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:11
47 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.


ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.


ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.


ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.


ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.


ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!


ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.


ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.


ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ.


ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.


ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.


ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.


ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು