Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:7 - ಪರಿಶುದ್ದ ಬೈಬಲ್‌

7 ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೆ ಹುಳಿಯನ್ನು ತೆಗೆದುಹಾಕಿ ಹೊಸ ಕಣಿಕದಂತಾಗಿರ್ರಿ. ಯಾಕಂದರೆ ನಮ್ಮ ಪಸ್ಕದ ಯಜ್ಞದ ಕುರಿಯು ಕೊಯಿದದೆ; ಅದಾವದಂದರೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೊಸ ಕಣಕವಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ನೀವು ಹುಳಿಯಿಲ್ಲದವರಾಗಿದ್ದೀರಲ್ಲ. ಏಕೆಂದರೆ ನಮ್ಮ ಪಸ್ಕದ ಕುರಿಯಾದ ಕ್ರಿಸ್ತ ಯೇಸು ಯಜ್ಞಾರ್ಪಿತನಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚೆಸಾಟ್ನಿ ಜುನ್ನೊ ಪಾಪಾಚೊ ಸೊಡೊ ಕಾಡುನ್ ಟಾಕಾ, ಅನಿ ತುಮಿ ಸಗ್ಳ್ಯಾ ರಿತಿನ್ ನಿತಳ್ ಹೊವಾ, ತನ್ನಾ ತುಮಿ ಕಸ್ಲೊಬಿ ಸೊಡೊ ನಸಲ್ಲೆ ಪಿಟ್ಟ್ ಹೊತ್ಯಾಸಿ, ಕಶ್ಯಾಕ್ ಮಟ್ಲ್ಯಾರ್ ಅಮ್ಚೆ ಪಾಸ್ಕಾಚೆ ಜೆವಾನ್ ತಯಾರ್ ಹಾಯ್, ಕ್ರಿಸ್ತಾಕ್ ಅಮ್ಚ್ಯಾ ಪಾಸ್ಕಾಚ್ಯಾ ಬೊಕ್ಡಾಚಿ ಬಲಿ ಭೆಟ್ವುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:7
19 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!”


ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.


ರೊಟ್ಟಿಯು ಒಂದೇ. ಆದ್ದರಿಂದ ನಮ್ಮಲ್ಲಿ ಅನೇಕರಿದ್ದರೂ ನಾವು ಒಂದೇ ದೇಹವಾಗಿದ್ದೇವೆ. ಯಾಕೆಂದರೆ ನಾವೆಲ್ಲಾ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಳ್ಳುತ್ತೇವೆ.


ಅಂದು ಪಸ್ಕಹಬ್ಬದ ಸಿದ್ಧತೆಯ ದಿನ ಮತ್ತು ಆಗಲೇ ಮಧ್ಯಾಹ್ನವಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ರಾಜನು!” ಎಂದು ಹೇಳಿದನು.


ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.


ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು.


ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”


ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು