Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:12 - ಪರಿಶುದ್ದ ಬೈಬಲ್‌

12 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ನನಗೆ ಸ್ವಾತಂತ್ರ್ಯವೇನೋ ಉಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ನನಗೆ ಸ್ವಾತಂತ್ರ್ಯವುಂಟು, ಆದರೆ ನಾನು ಯಾವದಕ್ಕೂ ಒಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ” ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಮಿಯಾ ಕಾಯ್ಬಿ ಕರುಕ್ ಹೊತಾ ಮನುನ್ ತಿಯಾ ಮನ್ಸಿಲ್, ಖರೆ ಮಿಯಾ ಕಾಯ್ ಕರ್‍ತಾ ತೆ ಸಗ್ಳೆ ಮಾಜ್ಯಾ ಪಾಯ್ದ್ಯಾಕ್ ಪಡಿನಾ. ಮಿಯಾ ಕಾಯ್ಬಿ ಕರುಕ್ ಹೊತಾ ತೆ ಖರೆ ಹಾಯ್, ಖರೆ ಮಿಯಾ ಕೊನಾಚೊಬಿ ಗುಲಾಮ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:12
12 ತಿಳಿವುಗಳ ಹೋಲಿಕೆ  

ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


“ನಮಗೆ ಸಹಾಯ ಮಾಡಿ” ಎಂದು ನಿಮ್ಮನ್ನು ಕೇಳಲು ನಮಗೆ ಹಕ್ಕಿತ್ತು. ಆದರೆ ನಮ್ಮ ಪೋಷಣೆಗೆ ಬೇಕಾದದ್ದನ್ನು ನಾವೇ ದುಡಿದು ಸಂಪಾದಿಸಿದೆವು, ಏಕೆಂದರೆ ನಿಮಗೆ ನಾವು ಮಾದರಿಯಾಗಬೇಕೆಂದಿದ್ದೆವು.


ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.


ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.


ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು