Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:13 - ಪರಿಶುದ್ದ ಬೈಬಲ್‌

13 “ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಖಾನ್ ಪೊಟಾಸಾಟ್ನಿ ಅನಿ ಪೊಟ್ ಖಾನಾಸಾಟ್ನಿ” ಮನ್ತಲೆ ಖರೆ ಹಾಯ್: ಹೆ ಅನಿ ತೆ ದೊನಿಬಿ ದೆವ್ ಎಕ್ ದಿಸ್ ನಾಪತ್ತೊ ಕರ್‍ತಾ. ಆಂಗ್ ವೆಭಿಚಾರಾಸಾಟ್ನಿ ನ್ಹಯ್, ತೆ ಧನಿಯಾಸಾಟ್ನಿ ಅನಿ ಧನಿ ಆಂಗಾಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:13
20 ತಿಳಿವುಗಳ ಹೋಲಿಕೆ  

ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.


ನೀವೇ ದೇವರ ಆಲಯವಾಗಿದ್ದೀರಿ. ಇದು ನಿಮಗೆ ಚೆನ್ನಾಗಿ ತಿಳಿದಿದೆ. ದೇವರಾತ್ಮನು ನಿಮ್ಮೊಳಗೆ ವಾಸವಾಗಿದ್ದಾನೆ.


ಆದರೆ ನೀವು ಭೂಲೋಕದ ಜೀವನದಲ್ಲಿ ಪಾಪಕ್ಕೆ ಅಧೀನರಾಗಿರಬೇಡಿ; ನಿಮ್ಮ ಪಾಪಾಧೀನಸ್ವಭಾವದ ದುರಾಶೆಗಳ ಆಡಳಿತಕ್ಕೆ ಒಳಗಾಗಬೇಡಿ.


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು.


ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ.


ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ.


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.


ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.


ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.


ನಿಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು ತಿಂದರು. ಆದರೆ ಎಲ್ಲಾ ಜನರಂತೆ ಅವರೂ ಸತ್ತುಹೋದರು.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ. ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.)


ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು