Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:2 - ಪರಿಶುದ್ದ ಬೈಬಲ್‌

2 ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬದು ನಿಮಗೆ ತಿಳಿಯದೋ? ಲೋಕವು ನಿವ್ಮಿುಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವದಕ್ಕೆ ಅಯೋಗ್ಯರಾಗಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚಿ ಲೊಕಾ ಜಗಾಚಿ ಝಡ್ತಿ ಕರ್ತಾತ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತುಮಿ ಜರ್ ಹ್ಯಾ ಜಗಾಚಿ ಝಡ್ತಿ ಕರ್‍ತಲೆ ತರ್ ಹ್ಯಾ ಚಿಲ್ಲರ್ ವಿಶಯಾಂಚೆ ನಿರ್ನಯ್ ಕರುಕ್ ತುಮ್ಚ್ಯಾನ್ ಹೊಯ್ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:2
18 ತಿಳಿವುಗಳ ಹೋಲಿಕೆ  

ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.


ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.


ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ.


ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.


ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.


ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.


ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು