Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:15 - ಪರಿಶುದ್ದ ಬೈಬಲ್‌

15 ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ವಿಶ್ವಾಸಾತ್ ನಸಲ್ಲೊ ವಾಂಗ್ಡಿ ಸೊಡುನ್ ಜಾತಾ ಮನುನ್ ಮನ್ತಾ ಜಾಲ್ಯಾರ್, ತೊ ನಾ ತರ್ ತಿ ಜಾಂವ್ದಿತ್, ಅಸ್ಲ್ಯಾ ವಿಶಯಾತ್ ಎಕ್ ಭಾವಾಕ್ ನಾ ಹೊಲ್ಯಾರ್ ಭೆನಿಕ್ ಕಸ್ಲಿಬಿ ಜಬರ್ದಸ್ತಿ ನಾ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ತುಮ್ಕಾ ಸಮಾದಾನಾನ್ ಜಿವನ್ ಕರುಕ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:15
11 ತಿಳಿವುಗಳ ಹೋಲಿಕೆ  

ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


ಪರಲೋಕದಲ್ಲಿರುವ ನನ್ನ ತಂದೆ ಇಚ್ಛಿಸುವಂಥವುಗಳನ್ನು ಮಾಡುವವನೇ ನನ್ನ ನಿಜವಾದ ಸಹೋದರ, ಸಹೋದರಿ ಮತ್ತು ತಾಯಿ” ಎಂದು ಹೇಳಿದನು.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ಅಥವಾ ಸಹೋದರಿಯಾಗಿರುವವಳಿಗೆ ಬಟ್ಟೆಗಳು ಬೇಕಾಗಿರಬಹುದು ಅಥವಾ ತಿನ್ನಲು ಆಹಾರ ಬೇಕಾಗಿರಬಹುದು.


ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.


ಅವನ ಮನೆಯಿಂದ ಅವಳು ಹೊರಗೆ ಕಳುಹಿಸಲ್ಪಟ್ಟ ಮೇಲೆ ಆಕೆ ಬೇರೊಬ್ಬನನ್ನು ಮದುವೆಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು